ಬ್ರೇಕಿಂಗ್ ನ್ಯೂಸ್
14-01-21 09:34 pm Mangaluru Correspondant ಕರಾವಳಿ
ಮಂಗಳೂರು, ಜ.14: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇದರ ಮಂಗಳೂರು ಮಹಾನಗರ ಘಟಕದ ವತಿಯಿಂದ ಆಯೋಜಿಸಿದ್ದ ವಿವೇಕ ಸ್ಪರ್ಧೆ -2021 ಹಾಗೂ ರಕ್ತದಾನ ಶಿಬಿರವನ್ನು ಮಂಗಳೂರಿನ ಉದ್ಯಮಿ ಪುಷ್ಪರಾಜ್ ಜೈನ್ ಉದ್ಘಾಟಿಸಿದರು.
ವಿವೇಕಾನಂದರ ಆದರ್ಶದಲ್ಲಿ ಮುನ್ನಡೆಯುತ್ತಿರುವ ಎಬಿವಿಪಿ, ಸಮಾಜಕ್ಕೆ ಉತ್ತಮ ವ್ಯಕ್ತಿತ್ವವುಳ್ಳ ನಾಗರಿಕರನ್ನು ನೀಡುತ್ತಿದೆ. ಇಂತಹ ಸಂಘಟನೆಯಿಂದ ಇನ್ನಷ್ಟು ಸಮಾಜ ಪರ ಒಲವುಳ್ಳವರು ಹುಟ್ಟಿ ಬರಲಿ ಎಂದು ಅವರು ಆಶಿಸಿದರು.
ಮುಖ್ಯ ಅತಿಥಿಯಾಗಿ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ರವೀಂದ್ರನಾಥ ರೈ ಉಪಸ್ಥಿತರಿದ್ದರು. ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ದೀಪ್ತಿ , ನಗರ ಅಧ್ಯಕ್ಷೆ ಭಾರತಿ ಪ್ರಭು, ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಬರ್ಕೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಜ್ಯೋತಿರ್ಲಿಂಗ ಮಾತನಾಡಿ ನಮ್ಮ ಸಂಸ್ಕೃತಿಯ ಹಿರಿಮೆಯನ್ನು ಜಗತ್ತಿಗೆ ಪರಿಚಯಿಸಿದ ಸಂತನ ಜಯಂತಿಯನ್ನು ಆಚರಿಸುವುದರೊಂದಿಗೆ ನಾವೆಲ್ಲರೂ ಈ ಸಂಸ್ಕೃತಿಯನ್ನು ಸಂಸ್ಕಾರದೊಂದಿಗೆ ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು ಎಂದು ಹೇಳಿ ಜಾನಪದ ಗೀತೆಯೊಂದನ್ನು ಹಾಡಿದರು.

ರಕ್ತದಾನ ಶಿಬಿರದಲ್ಲಿ ನಲವತ್ತೈದು ಯೂನಿಟ್ ರಕ್ತವನ್ನು ವಿದ್ಯಾರ್ಥಿಗಳು ನೀಡಿದರು. ಸ್ಪರ್ಧೆಯಲ್ಲಿ 80 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜೇತರಿಗೆ ನಗದು ಪುಸ್ತಕ ಮತ್ತು ಟ್ರೋಫಿಯನ್ನು ಬಹುಮಾನವಾಗಿ ನೀಡಲಾಯಿತು.
ಸಮಾರೋಪ ಸಮಾರಂಭದಲ್ಲಿ ವಿಭಾಗ ಪ್ರಮುಖರಾದ ಕೇಶವ ಬಂಗೇರ, ಪ್ರಾಂತ ಕಾರ್ಯ ಸಮಿತಿ ಸದಸ್ಯ ಮಣಿಕಂಠ ಕಳಸ, ತಾಲ್ಲೂಕು ಸಂಚಾಲಕ ನಿಶಾನ್ ಆಳ್ವ ಉಪಸ್ಥಿತರಿದ್ದರು.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm