ಬ್ರೇಕಿಂಗ್ ನ್ಯೂಸ್
15-01-21 10:55 am Mangalore Correspondent ಕರಾವಳಿ
ಮಂಗಳೂರು, ಜ.15: ಶಾರ್ಜಾದಿಂದ ಭಾರತಕ್ಕೆ ಅಕ್ರಮವಾಗಿ ಭಾರೀ ಪ್ರಮಾಣದಲ್ಲಿ ಚಿನ್ನ ತರುತ್ತಿದ್ದ ಮತ್ತಿಬ್ಬರು ಖದೀಮರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ಬಂಧಿಸಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಮೇಲ್ಪರಂಬ ನಿವಾಸಿ ಫೈಸಲ್ ತೊಟ್ಟಿ(37), ಮೊಹಮ್ಮದ್ ಸುಹೈಬ್ (31) ಬಂಧಿತರು. ಇವರು ತಮ್ಮ ಒಳ ಉಡುಪಿನ ಒಳಗೆ ರಹಸ್ಯವಾಗಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ತರುತ್ತಿದ್ದರು. ಪ್ರಯಾಣಿಕರ ತಪಾಸಣೆ ಸಂದರ್ಭದಲ್ಲಿ ಸಂಶಯ ಕಂಡುಬಂದು ಆರೋಪಿಗಳನ್ನು ಪ್ಯಾಂಟ್, ಶರ್ಟ್ ಬಿಚ್ಚಿಸಿ ತನಿಖೆಗೆ ಒಳಪಡಿಸಿದಾಗ, ಚಿನ್ನದ ಅಂಶ ಪತ್ತೆಯಾಗಿದೆ. ಇಬ್ಬರ ಬಳಿ 24 ಕ್ಯಾರೆಟ್ ಮೌಲ್ಯದ 2 ಕೇಜಿ 154 ಗ್ರಾಮ್ ಚಿನ್ನ ಸಿಕ್ಕಿದ್ದು , ಇದರ ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ ಒಂದು ಕೋಟಿ 9 ಲಕ್ಷ ಆಗುತ್ತದೆ ಎಂದು ಕಸ್ಟಮ್ಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಆರೋಪಿಗಳು ಜ.14ರಂದು ಸಂಜೆ ಶಾರ್ಜಾದಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಮಂಗಳೂರು ಕಸ್ಟಮ್ಸ್ ವಿಭಾಗದ ಉಪಾಯುಕ್ತ ಪ್ರವೀಣ್ ಖಂಡಿ, ಎಸ್ಪಿಗಳಾದ ಶ್ರೀಕಾಂತ್, ರಂಜನ್ ಬೆಹ್ರಾ, ನವೀನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕಸ್ಟಮ್ಸ್ ಆಯುಕ್ತರಾದ ಇಮಾಮುದ್ದೀನ್ ಅಹ್ಮದ್, ಜಂಟಿ ಆಯುಕ್ತ ಜೋನ್ಸ್ ಜಾರ್ಜ್, ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Gold worth Rs 1.9 Crore seized at Mangalore International Airport by a passenger who arrived from Dubai. He was smuggling the gold by hiding it inside his innewear.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm