ಬ್ರೇಕಿಂಗ್ ನ್ಯೂಸ್
15-01-21 01:56 pm Udupi Correspondent ಕರಾವಳಿ
ಉಡುಪಿ, ಜ.14: ಶ್ರೀಕೃಷ್ಣ ಮಠದಲ್ಲಿ ನಡೆದಿರುವ ಸಪ್ತೋತ್ಸವದ ಆರನೇ ದಿನವಾದ ಗುರುವಾರ ರಾತ್ರಿ ಮಕರ ಸಂಕ್ರಾಂತಿಯ ಅಂಗವಾಗಿ ಪರ್ಯಾಯ ಶ್ರೀ ಅದಮಾರು ಮಠಾಧೀಶರ ನೇತೃತ್ವದಲ್ಲಿ ಆಕರ್ಷಕ ಮೂರು ತೇರು ಉತ್ಸವ ನಡೆಯಿತು.
ಮೂರು ತೇರು ಉತ್ಸವದಲ್ಲಿ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥರು ಹಾಗೂ ಹಿರಿಯ ಯತಿಗಳಾದ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿಯವರಲ್ಲದೇ, ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ, ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥರು ಹಾಗೂ ಶ್ರೀವಿದ್ಯಾರಾಜೇಶ್ವರ ತೀರ್ಥರು, ಪೇಜಾವರಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಭಾಗವಹಿಸಿದ್ದರು.
ಸಂಜೆ ಸುಮಾರು 7:30ರ ಸುಮಾರಿಗೆ ಶ್ರೀಕೃಷ್ಣ, ಮುಖ್ಯಪ್ರಾಣರ ಮೂರ್ತಿ ಗಳನ್ನು ಸುವರ್ಣ ಪಲ್ಲಕ್ಕಿಯಲ್ಲಿ ಗರ್ಭಗುಡಿಯಿಂದ ಹೊರತಂದು ರಂಗುರಂಗಿನ ವಿದ್ಯುದ್ದೀಪಗಳಿಂದ ಅಲಂಕೃತ ಮಧ್ವ ಸರೋವರದಲ್ಲಿ ತೆಪ್ಪೋತ್ಸವ ನಡೆಸಲಾಯಿತು. ಬಳಿಕ ಮಕರ ಸಂಕ್ರಾಂತಿಯ ದಿನದಂದು ಮೊದಲ ಬಾರಿ ಉತ್ಸವದಲ್ಲಿ ಪಾಲ್ಗೊಳ್ಳುವ ಬ್ರಹ್ಮರಥದಲ್ಲಿ ಶ್ರೀಕೃಷ್ಣನ ಉತ್ಸವ ಮೂರ್ತಿಯನ್ನು, ಚಿಕ್ಕ ರಥದಲ್ಲಿ ಮುಖ್ಯಪ್ರಾಣನ ಉತ್ಸವ ಮೂರ್ತಿಯನ್ನು ಹಾಗೂ ಗರುಡ ರಥದಲ್ಲಿ ಶ್ರೀಅನಂತೇಶ್ವರ ಹಾಗೂ ಚಂದ್ರವೌಳೀಶ್ವರ ಮೂರ್ತಿಯನ್ನಿರಿಸಿ ರಥಬೀದಿಗೆ ಒಂದು ಸುತ್ತು ಬರಲಾಯಿತು.
ಭಕ್ತರಿಂದ ಎಳೆಯಲ್ಪಟ್ಟ ಮೂರು ರಥಗಳು ರಥಬೀದಿಯ ದಕ್ಷಿಣ ಭಾಗದಲ್ಲಿ ಪುತ್ತಿಗೆ ಮಠದ ಎದುರು ಒಂದೇ ರೇಖೆಯಲ್ಲಿ ನಿಂತಾಗ ಸಾವಿರಾರು ಮಂದಿ ಭಕ್ತರು ಜಯಘೋಷ ಮಾಡಿದರು. ರಥಗಳ ಮುಂದೆ ವರ್ಣವೈವಿಧ್ಯ ಅತ್ಯಾಕರ್ಷಕ ಸುಡುಮದ್ದು ಗಳನ್ನು ಸಿಡಿಸಿ ಆಕಾಶದಲ್ಲಿ ಬಣ್ಣಗಳ ಚಿತ್ತಾರವನ್ನು ಮೂಡಿಸಲಾಯಿತು.
Photo Gallery : ಕೃಷ್ಣ ಮಠದಲ್ಲಿ ಮೂರು ತೇರು ಉತ್ಸವ
On account of Makara Sankranthi festival, car festival with all the three chariots of Sri Krishna Math was celebrated at Car Street of the Math here on the evening of Thursday January 14. Heads of six Maths witnessed the festivities.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 09:24 pm
HK News Desk
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm