ಬ್ರೇಕಿಂಗ್ ನ್ಯೂಸ್
16-01-21 01:05 pm Udupi Correspondent ಕರಾವಳಿ
ಉಡುಪಿ, ಜ.16: ದೈತ್ಯ ವೇಷಗಳನ್ನು ಧರಿಸಿ, ಅಸಹಾಯಕ ಮಕ್ಕಳಿಗಾಗಿ ನಿಧಿ ಸಂಗ್ರಹಿಸಿ ಹೆಸರಾಗಿದ್ದ ಸಮಾಜ ಸೇವಕ ರವಿ ಕಡಪಾಡಿಯವರು ಇದೀಗ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 25 ಲಕ್ಷ ರೂ. ಗೆದ್ದುಕೊಂಡಿದ್ದಾರೆ. ಅಲ್ಲದೆ ಆ ಮೊತ್ತವನ್ನೂ ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ.
ಶುಕ್ರವಾರ ರಾತ್ರಿ ಪ್ರಸಾರವಾದ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದ ಕರ್ಮವೀರ್ ಸ್ಪೆಷಲ್ ಎಪಿಸೋಡ್ ವಿಭಾಗದಲ್ಲಿ ರವಿ ಕಟಪಾಡಿ ಭಾಗವಹಿಸಿದ್ದರು. ಅವರ ಜೊತೆ ಇನ್ನೊಬ್ಬ ಸಮಾಜಸೇವಕ ಅಂಬಾ ಬೆಹಾನ್ ಕೂಡ ಭಾಗವಹಿಸಿದ್ದು, ಜಂಟಿಯಾಗಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಆರಂಭಿಕ ಏಳು ಪ್ರಶ್ನೆಗಳಿಗೆ ರವಿಯವರು ಉತ್ತರಿಸಿದರೆ, ನಂತರದ ಪ್ರಶ್ನೆಗಳಿಗೆ ಅಂಬಾ ಉತ್ತರ ನೀಡಿದರು. ಹಿರಿಯ ನಟ ಅನುಪಮ್ ಖೇರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.


ರವಿ ಕಡಪಾಡಿಯವರು ಕಳೆದ ಆರು ವರ್ಷಗಳಿಂದ ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ದೈತ್ಯ ವೇಷಗಳನ್ನು ಹಾಕಿ, ಜನರನ್ನು ರಂಜಿಸುವುದಲ್ಲದೆ ಅದರಿಂದ ಬಂದ ನಿಧಿಯನ್ನು ಬಡ ಮಕ್ಕಳಿಗಾಗಿ ವಿನಿಯೋಗಿಸುತ್ತಿದ್ದರು. ರವಿಯವರ ಮಾನವೀಯ ಸೇವೆಯನ್ನು ಗುರುತಿಸಿ, ಹಿಂದಿ ವಾಹಿನಿ ಜನಪ್ರಿಯ ಕಾರ್ಯಕ್ರಮದಲ್ಲಿ ಅವಕಾಶ ನೀಡಿತ್ತು.
ದೈತ್ಯ ವೇಷಗಳನ್ನು ಹಾಕಿ, ಮಕ್ಕಳ ಕಲ್ಯಾಣಕ್ಕಾಗಿ ಸಮಾಜ ಸೇವೆ ಮಾಡುವ ರವಿ ಕಟಪಾಡಿಯವರನ್ನು ಕಾರ್ಯಕ್ರಮದಲ್ಲಿ ಪ್ರಶಂಸಿಸಿದ ಅಮಿತಾಬ್ ಬಚ್ಚನ್, ದರಿಯಾ ದಿಲ್ ದಾನವ್ ಬಿರುದು ನೀಡುವುದಾಗಿ ಘೋಷಿಸಿದ್ದು ವಿಶೇಷವಾಗಿತ್ತು.
Social worker Ravi Katapadi from Udupi wins 25 Lakhs on ‘Karamveer Special’ episode of popular Hindi game show ‘Kaun Banega Crorepati’ (KBC).
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm