ಬ್ರೇಕಿಂಗ್ ನ್ಯೂಸ್
16-01-21 01:05 pm Udupi Correspondent ಕರಾವಳಿ
ಉಡುಪಿ, ಜ.16: ದೈತ್ಯ ವೇಷಗಳನ್ನು ಧರಿಸಿ, ಅಸಹಾಯಕ ಮಕ್ಕಳಿಗಾಗಿ ನಿಧಿ ಸಂಗ್ರಹಿಸಿ ಹೆಸರಾಗಿದ್ದ ಸಮಾಜ ಸೇವಕ ರವಿ ಕಡಪಾಡಿಯವರು ಇದೀಗ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 25 ಲಕ್ಷ ರೂ. ಗೆದ್ದುಕೊಂಡಿದ್ದಾರೆ. ಅಲ್ಲದೆ ಆ ಮೊತ್ತವನ್ನೂ ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ.
ಶುಕ್ರವಾರ ರಾತ್ರಿ ಪ್ರಸಾರವಾದ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದ ಕರ್ಮವೀರ್ ಸ್ಪೆಷಲ್ ಎಪಿಸೋಡ್ ವಿಭಾಗದಲ್ಲಿ ರವಿ ಕಟಪಾಡಿ ಭಾಗವಹಿಸಿದ್ದರು. ಅವರ ಜೊತೆ ಇನ್ನೊಬ್ಬ ಸಮಾಜಸೇವಕ ಅಂಬಾ ಬೆಹಾನ್ ಕೂಡ ಭಾಗವಹಿಸಿದ್ದು, ಜಂಟಿಯಾಗಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಆರಂಭಿಕ ಏಳು ಪ್ರಶ್ನೆಗಳಿಗೆ ರವಿಯವರು ಉತ್ತರಿಸಿದರೆ, ನಂತರದ ಪ್ರಶ್ನೆಗಳಿಗೆ ಅಂಬಾ ಉತ್ತರ ನೀಡಿದರು. ಹಿರಿಯ ನಟ ಅನುಪಮ್ ಖೇರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.


ರವಿ ಕಡಪಾಡಿಯವರು ಕಳೆದ ಆರು ವರ್ಷಗಳಿಂದ ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ದೈತ್ಯ ವೇಷಗಳನ್ನು ಹಾಕಿ, ಜನರನ್ನು ರಂಜಿಸುವುದಲ್ಲದೆ ಅದರಿಂದ ಬಂದ ನಿಧಿಯನ್ನು ಬಡ ಮಕ್ಕಳಿಗಾಗಿ ವಿನಿಯೋಗಿಸುತ್ತಿದ್ದರು. ರವಿಯವರ ಮಾನವೀಯ ಸೇವೆಯನ್ನು ಗುರುತಿಸಿ, ಹಿಂದಿ ವಾಹಿನಿ ಜನಪ್ರಿಯ ಕಾರ್ಯಕ್ರಮದಲ್ಲಿ ಅವಕಾಶ ನೀಡಿತ್ತು.
ದೈತ್ಯ ವೇಷಗಳನ್ನು ಹಾಕಿ, ಮಕ್ಕಳ ಕಲ್ಯಾಣಕ್ಕಾಗಿ ಸಮಾಜ ಸೇವೆ ಮಾಡುವ ರವಿ ಕಟಪಾಡಿಯವರನ್ನು ಕಾರ್ಯಕ್ರಮದಲ್ಲಿ ಪ್ರಶಂಸಿಸಿದ ಅಮಿತಾಬ್ ಬಚ್ಚನ್, ದರಿಯಾ ದಿಲ್ ದಾನವ್ ಬಿರುದು ನೀಡುವುದಾಗಿ ಘೋಷಿಸಿದ್ದು ವಿಶೇಷವಾಗಿತ್ತು.
Social worker Ravi Katapadi from Udupi wins 25 Lakhs on ‘Karamveer Special’ episode of popular Hindi game show ‘Kaun Banega Crorepati’ (KBC).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm