ಬ್ರೇಕಿಂಗ್ ನ್ಯೂಸ್
16-01-21 01:05 pm Udupi Correspondent ಕರಾವಳಿ
ಉಡುಪಿ, ಜ.16: ದೈತ್ಯ ವೇಷಗಳನ್ನು ಧರಿಸಿ, ಅಸಹಾಯಕ ಮಕ್ಕಳಿಗಾಗಿ ನಿಧಿ ಸಂಗ್ರಹಿಸಿ ಹೆಸರಾಗಿದ್ದ ಸಮಾಜ ಸೇವಕ ರವಿ ಕಡಪಾಡಿಯವರು ಇದೀಗ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 25 ಲಕ್ಷ ರೂ. ಗೆದ್ದುಕೊಂಡಿದ್ದಾರೆ. ಅಲ್ಲದೆ ಆ ಮೊತ್ತವನ್ನೂ ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ.
ಶುಕ್ರವಾರ ರಾತ್ರಿ ಪ್ರಸಾರವಾದ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದ ಕರ್ಮವೀರ್ ಸ್ಪೆಷಲ್ ಎಪಿಸೋಡ್ ವಿಭಾಗದಲ್ಲಿ ರವಿ ಕಟಪಾಡಿ ಭಾಗವಹಿಸಿದ್ದರು. ಅವರ ಜೊತೆ ಇನ್ನೊಬ್ಬ ಸಮಾಜಸೇವಕ ಅಂಬಾ ಬೆಹಾನ್ ಕೂಡ ಭಾಗವಹಿಸಿದ್ದು, ಜಂಟಿಯಾಗಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಆರಂಭಿಕ ಏಳು ಪ್ರಶ್ನೆಗಳಿಗೆ ರವಿಯವರು ಉತ್ತರಿಸಿದರೆ, ನಂತರದ ಪ್ರಶ್ನೆಗಳಿಗೆ ಅಂಬಾ ಉತ್ತರ ನೀಡಿದರು. ಹಿರಿಯ ನಟ ಅನುಪಮ್ ಖೇರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.


ರವಿ ಕಡಪಾಡಿಯವರು ಕಳೆದ ಆರು ವರ್ಷಗಳಿಂದ ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ದೈತ್ಯ ವೇಷಗಳನ್ನು ಹಾಕಿ, ಜನರನ್ನು ರಂಜಿಸುವುದಲ್ಲದೆ ಅದರಿಂದ ಬಂದ ನಿಧಿಯನ್ನು ಬಡ ಮಕ್ಕಳಿಗಾಗಿ ವಿನಿಯೋಗಿಸುತ್ತಿದ್ದರು. ರವಿಯವರ ಮಾನವೀಯ ಸೇವೆಯನ್ನು ಗುರುತಿಸಿ, ಹಿಂದಿ ವಾಹಿನಿ ಜನಪ್ರಿಯ ಕಾರ್ಯಕ್ರಮದಲ್ಲಿ ಅವಕಾಶ ನೀಡಿತ್ತು.
ದೈತ್ಯ ವೇಷಗಳನ್ನು ಹಾಕಿ, ಮಕ್ಕಳ ಕಲ್ಯಾಣಕ್ಕಾಗಿ ಸಮಾಜ ಸೇವೆ ಮಾಡುವ ರವಿ ಕಟಪಾಡಿಯವರನ್ನು ಕಾರ್ಯಕ್ರಮದಲ್ಲಿ ಪ್ರಶಂಸಿಸಿದ ಅಮಿತಾಬ್ ಬಚ್ಚನ್, ದರಿಯಾ ದಿಲ್ ದಾನವ್ ಬಿರುದು ನೀಡುವುದಾಗಿ ಘೋಷಿಸಿದ್ದು ವಿಶೇಷವಾಗಿತ್ತು.
Social worker Ravi Katapadi from Udupi wins 25 Lakhs on ‘Karamveer Special’ episode of popular Hindi game show ‘Kaun Banega Crorepati’ (KBC).
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm