ಬ್ರೇಕಿಂಗ್ ನ್ಯೂಸ್
16-01-21 01:26 pm Mangalore Correspondent ಕರಾವಳಿ
ಮಂಗಳೂರು, ಜ.16: ಮಂಗಳೂರು ವಿವಿ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗಿನಲ್ಲಿ ಪಿಯುಸಿ ತರಗತಿಗಳು ಅಧಿಕೃತವಾಗಿ ಜ.15ರಿಂದ ಆರಂಭಗೊಂಡಿದ್ದು, ಮೊದಲ ದಿನ 45 ಶೇ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ.
ಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31 ಸರಕಾರಿ ಪಿಯು ಕಾಲೇಜುಗಳಿದ್ದು, 18,644 ಮಕ್ಕಳ ಪೈಕಿ 8194 ಮಂದಿ ಹಾಜರಾಗಿದ್ದಾರೆ. 27 ಅನುದಾನಿತ ಕಾಲೇಜುಗಳಲ್ಲಿ 25696 ವಿದ್ಯಾರ್ಥಿಗಳ ಪೈಕಿ 11507 ಮಂದಿ ಮೊದಲ ದಿನ ತರಗತಿಗೆ ಹಾಜರಾಗಿದ್ದಾರೆ. ವೀಕೆಂಡ್ ಆಗಿರುವುದರಿಂದ ಹೆಚ್ಚು ಮಂದಿ ಕಾಲೇಜಿಗೆ ಬಂದಿಲ್ಲ. ಮುಂದಿನ ವಾರ ಬಹುತೇಕ ವಿದ್ಯಾರ್ಥಿಗಳು ಕಾಲೇಜಿನತ್ತ ಬರುವ ನಿರೀಕ್ಷೆಯಿದೆ ಎಂದು ಕಾಲೇಜು ಸಿಬಂದಿ ಹೇಳುತ್ತಾರೆ.

ಈಗಾಗ್ಲೇ ಡಿಗ್ರಿ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳು ಆರಂಭಗೊಂಡಿದ್ದು, ಆರಂಭದಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಈಗ ಬಹುತೇಕ ಫುಲ್ ಆಗಿದೆ. ಈಗ ಪಿಯು ತರಗತಿ ಆರಂಭಗೊಂಡಿದ್ದು ಉದ್ಯೋಗಕ್ಕೆ ಹೋಗುತ್ತಿರುವ ಮಂದಿಗೆ ತಿಳಿದಿರಲಿಕ್ಕಿಲ್ಲ. ಇನ್ನು ಕೆಲವರು ಆನ್ ಲೈನ್ ಕ್ಲಾಸ್ ಗೆ ಒಗ್ಗಿ ಹೋಗಿದ್ದಾರೆ. ಇದೇ ವೇಳೆ, ಸರಕಾರ ಇನ್ನೂ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಲ್ಲ. ಇನ್ನು ಕಾಸರಗೋಡು ಜಿಲ್ಲೆಯಿಂದ ಬರುವ ವಿದ್ಯಾರ್ಥಿಗಳಿಗೆ ಇನ್ನೂ ರೈಲು ಆರಂಭಗೊಳ್ಳದ ಕಾರಣ ಕಾಲೇಜಿಗೆ ಬರುವುದು ಕಷ್ಟವಾಗಿದೆ. ಮತ್ತೊಂದೆಡೆ ಸರಕಾರಿ ಹಾಸ್ಟೆಲ್ ಕೂಡ ಆರಂಭವಾಗಿಲ್ಲ. ಇವೆಲ್ಲ ಕಾರಣದಿಂದ ತರಗತಿ ಹಾಜರಾತಿ ಕಡಿಮೆಯಾಗಿರುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.
Pu colleges start in Mangalore after a long period of holiday due to Covid 19 lockdown and now students have attended college with 45 per cent attendance.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm