ಬ್ರೇಕಿಂಗ್ ನ್ಯೂಸ್
16-01-21 06:00 pm Mangalore Correspondent ಕರಾವಳಿ
ಮಂಗಳೂರು, ಜ.16 : ಖಾಸಗಿ ಬಸ್ನಲ್ಲಿ ಯುವತಿಗೆ ಸಹ ಪ್ರಯಾಣಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆ ಕುರಿತು ಜಾಲತಾಣದಲ್ಲಿ ಯುವತಿ ಪೋಸ್ಟ್ ಹಂಚಿಕೊಂಡಿದ್ದು ಬಳಿಕ ಅವರನ್ನು ಸಂಪರ್ಕಿಸಲಾಯಿತು. ಯುವತಿಯೇ ಉಳ್ಳಾಲ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ. ಒಂದು ವೇಳೆ ಯುವತಿ ದೂರು ನೀಡದಿದ್ದಲ್ಲಿ ಸ್ವಯಂಪ್ರೇರಿತ ದೂರನ್ನು ಪೊಲೀಸರೇ ದಾಖಲಿಸುತ್ತಿದ್ದರು ಎಂದು ಹೇಳಿದರು.
ಶೀಘ್ರದಲ್ಲೇ ಈ ಬಗ್ಗೆ ಬಸ್ ಮಾಲಕರ ಸಭೆ ಕರೆದು ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಲಾಗುವುದು. ಈ ಬಗ್ಗೆ ಕ್ರಮ ಕೈಗೊಳ್ಳಲು ಡಿಸಿಪಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬಸ್ಗಳಲ್ಲಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬಸ್ಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದರೆ ಇಂತಹ ಘಟನೆಗಳನ್ನು ತಡೆಗಟ್ಟಬಹುದು. ಅಲ್ಲದೆ, ಮಹಿಳಾ ತಂಡವೊಂದನ್ನು ರಚಿಸಿ, ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸಲು ಚಿಂತಿಸಿದ್ದೇವೆ. ಶೀಘ್ರದಲ್ಲಿಯೇ ಈ ಕಾರ್ಯಾಚರಣೆ ಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಿದರು.
ಜ.14ರಂದು ಅಪರಾಹ್ನ 3:45ರ ಸುಮಾರಿಗೆ ಯುವತಿಯೊಬ್ಬರು ಖಾಸಗಿ ಬಸ್ನಲ್ಲಿ ದೇರಳಕಟ್ಟೆಯಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದರು. ಈ ವೇಳೆ ಯುವತಿ ಪಕ್ಕದಲ್ಲಿ ಕುಳಿತ ವ್ಯಕ್ತಿಯೊಬ್ಬ ಆಕೆಯ ದೇಹ ಸ್ಪರ್ಶಿಸಿ ಕಿರುಕುಳ ನೀಡಿದ್ದ. ಈ ಬಗ್ಗೆ ಯುವತಿ ಇನ್ಸ್ಟಾಗ್ರಾಂನಲ್ಲಿ ಘಟನೆಯ ವಿವರ ಹಂಚಿಕೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಶೀಘ್ರದಲ್ಲಿ ಪತ್ತೆಹಚ್ಚಿ, ಕ್ರಮ ಕೈಗೊಳ್ಳಲಾಗುವುದು. ಇಂತಹ ಘಟನೆ ಯಾವುದೇ ಭಾಗದಲ್ಲಿ ನಡೆದರೂ 112 ನಂಬರ್ಗೆ ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದರು.
Mangalore city police commissioner announced special team to investigate sexual harassment case in private bus
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm