ಬ್ರೇಕಿಂಗ್ ನ್ಯೂಸ್
17-01-21 04:47 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜ.17 : ಮಂಗಳೂರಿನ ಬಡಗ ಎಕ್ಕಾರಿನಲ್ಲಿ ನಿರ್ಮಾಣಗೊಳ್ಳಬೇಕಿದ್ದ ಗಲಭೆಗಳನ್ನು ನಿಯಂತ್ರಿಸುವುದರಲ್ಲಿ ಮಹತ್ವದ ಪಾತ್ರ ವಹಿಸುವ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್ ಎ ಎಫ್) ಘಟಕ ಯಾರ ಅರಿವಿಗೂ ಬಾರದಂತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಸ್ಥಳಾಂತರಗೊಂಡಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಿರುವ ಅನ್ಯಾಯ. ಇದು ಸಂಸದ ನಳಿನ್ ಕುಮಾರ್ ಕಟೀಲರ ವೈಫಲ್ಯಕ್ಕೆ ಮತ್ತೊಂದು ಉದಾಹರಣೆ, ಸಂಸದರು ಈ ವೈಫಲ್ಯದ ಹೊಣೆ ಹೊತ್ತು ಜಿಲ್ಲೆಯ ಜನತೆಯ ಕ್ಷಮೆ ಕೋರಬೇಕು, ಸೂಕ್ತ ವಿವರಣೆ ನೀಡಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಮುನೀರ್ ಕಾಟಿಪಳ್ಳ, ಕ್ಷಿಪ್ರ ಕಾರ್ಯಾಚರಣೆ ಪಡೆಯ ಘಟಕ ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಗೆ ಅತೀ ಅಗತ್ಯವಾಗಿತ್ತು. ಸದಾ ಮತೀಯ ಉದ್ವಿಗ್ನತೆ ತಲೆದೋರುವ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಮಂಗಳೂರು ಕೇಂದ್ರ ಭಾಗವಾಗಿದೆ. ಕ್ಷಿಪ್ರ ಕಾರ್ಯಾಚರಣೆ ಪಡೆಯ ಘಟಕ ಮಂಗಳೂರಿನಲ್ಲಿ ಸ್ಥಾಪನೆಗೊಂಡರೆ ಅದು ವಿಮಾನ ನಿಲ್ದಾಣ ಸಹಿತ ಸಾರಿಗೆ ಸಂಪರ್ಕದ ಸೌಲಭ್ಯದಿಂದಾಗಿ ದೂರದ ಜಿಲ್ಲೆಗಳಿಗೂ ತಲುಪಲು ಅನುಕೂಲಕರ ಆಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಂತು ಈ ಘಟಕದ ಉಪಸ್ಥಿತಿಯೇ ಹಲವು ಹಿಂಸಾಚಾರಗಳಿಗೆ ಕಡಿವಾಣ ಹಾಕುವ ನೈತಿಕ ಶಕ್ತಿಯನ್ನು ಒದಗಿಸುತ್ತಿತ್ತು.
ಆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಮಂಗಳೂರು ತಾಲೂಕಿನ ಬಡಗ ಎಕ್ಕಾರು ಗ್ರಾಮದಲ್ಲಿ ಐವತ್ತು ಎಕರೆ ಸ್ಥಳವನ್ನು ಗುರುತಿಸಿ ಕ್ಷಿಪ್ರ ಕಾರ್ಯಾಚರಣೆ ಪಡೆ ಘಟಕಕ್ಕಾಗಿ ಕಾದಿರಿಸಲಾಗಿತ್ತು. ಹೆಚ್ಚುವರಿ ಭೂಮಿ ಅಗತ್ಯ ಬಿದ್ದಲ್ಲಿ ಒದಗಿಸುವ ಸಿದ್ಧತೆಗಳನ್ನು ಮಾಡಲಾಗಿತ್ತು. ಈಗ ಏಕಾಏಕಿ ಯಾವ ಚರ್ಚೆಗಳೂ ಇಲ್ಲದೆ, ಜಿಲ್ಲೆಯ ಜನರನ್ನು ಕತ್ತಲಲ್ಲಿಟ್ಟು ಕ್ಷಿಪ್ರ ಕಾರ್ಯಾಚರಣೆ ಪಡೆಯ ಘಟಕವನ್ನು ಯಾವ ರೀತಿಯಿಂದಲೂ ಸೂಕ್ತವಲ್ಲದ ಭದ್ರಾವತಿಗೆ ರಾತ್ರೋರಾತ್ರಿ ಸ್ಥಳಾಂತರಿಸಿ ಶಿಲನ್ಯಾಸ ನೆರವೇರಿಸಲಾಗಿದೆ. ಇದು ಸದಾ ಕೋಮು ಉದ್ವಿಗ್ನತೆಯಿಂದ ನರಳುವ ದಕ್ಷಿಣ ಕನ್ನಡ ಜಿಲ್ಲೆಗೆ ಆಗಿರುವ ಅನ್ಯಾಯ. ಈ ಕತ್ತಲ ಕಾರ್ಯಾಚರಣೆಗೆ ಉದ್ರೇಕಕಾರಿ ಭಾಷಣಗಳಿಗೆ ಪ್ರಸಿದ್ದರಾದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲರ ಅಸಾಮರ್ಥ್ಯವೇ ಕಾರಣ ಎಂದು ಹೇಳಿದ್ದಾರೆ.

ಜಿಲ್ಲೆಗೆ ಮಾರಕವಾದ ಮಾಲಿನ್ಯಕಾರಿ ಯೋಜನೆಗಳನ್ನು ಮಂಗಳೂರಿಗೆ ಡಂಪ್ ಮಾಡಲು ಅವಕಾಶ ನೀಡುವ ಸಂಸದರು, ಜನೋಪಯೋಗಿ ಯೋಜನೆಗಳು ಕೈತಪ್ಪುವಾಗ ಧ್ವನಿ ಎತ್ತದೆ ಜಿಲ್ಲೆಗೆ ಸತತ ಅನ್ಯಾಯವಾಗಲು ಕಾರಣರಾಗಿದ್ದಾರೆ. ಈ ಹಿಂದೆ ಕರಾವಳಿಯ ಬ್ಯಾಂಕುಗಳು ಉತ್ತರ ಭಾರತದ ಬ್ಯಾಂಕುಗಳೊಂದಿಗೆ ವಿಲೀನ, ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ಹಸ್ತಾಂತರ, ಇದೀಗ ಕ್ಷಿಪ್ರ ಕಾರ್ಯಾಚರಣೆ ಪಡೆಯ ಘಟಕ ಸ್ಥಳಾಂತರ ಸಂಸದರ ಅಸಾಮರ್ಥ್ಯ, ವೈಫಲ್ಯಗಳ ಪಟ್ಟಿಯನ್ನು ದೀರ್ಘಗೊಳಿಸುತ್ತಿದೆ. ಸಂಸದ ನಳಿನ್ ಕುಮಾರ್ ಕಟೀಲ್ ತನ್ನ ಗಂಭೀರ ವೈಫಲ್ಯಗಳಿಗಾಗಿ ಜಿಲ್ಲೆಯ ಜನತೆಯೊಂದಿಗೆ ಕ್ಷಮಾಪಣೆ ಕೋರಬೇಕು ಎಂದು ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.
The central government which had decided to set to RAF unit in Mangalore has now planned to shift it to Shivamogaa.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm