ಬ್ರೇಕಿಂಗ್ ನ್ಯೂಸ್
13-08-20 12:45 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 13: ಪ್ರವಾದಿ ಪೈಗಂಬರ್ ಅವರನ್ನು ಅವಹೇಳನ ಮಾಡಿದ ವಿಚಾರ ಒಂದ್ಕಡೆ ಹಿಂಸೆಯ ಕಿಡಿ ಹಬ್ಬಿಸಿದ್ದರೆ, ಇದೇ ವೇಳೆ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ಫೋಟೊಗಳನ್ನು ಅಪ್ಲೋಡ್ ಮಾಡಿರುವ ವಿಚಾರ ಈಗ ಆಕ್ರೋಶದ ಅಲೆ ಎಬ್ಬಿಸಿದೆ.
ಕೃಷ್ಣ ಜನ್ಮಾಷ್ಟಮಿಯ ಹಬ್ಬದಂದೇ ಕ್ರಿಸ್ತಿಯನ್ ಯುವತಿಯೊಬ್ಬಳು ತನ್ನ ಮುದ್ದಿನ ನಾಯಿಗೆ ಕೃಷ್ಣ ವೇಷ ಹಾಕಿ ಹಿಂದು ದೇವರನ್ನು ನಿಂದಿಸಿರುವ ಆರೋಪ ಕೇಳಿಬಂದಿದೆ. ಮಂಗಳೂರು ಮೂಲದ ಜೋಶಿಯಲ್ ಲೋಬೊ ಎನ್ನುವ ಮಾಡೆಲಿಂಗ್ ಕ್ಷೇತ್ರದಲ್ಲಿರುವ ಯುವತಿ ತನ್ನ ನಾಯಿ ಮರಿಗೆ ಕೃಷ್ಣನ ವೇಷ ಹಾಕಿದ್ದಾಳೆ. ಕೃಷ್ಣ ಜನ್ಮಾಷ್ಟಮಿಯಂದು ಹಿಂದುಗಳೆಲ್ಲ ತಮ್ಮ ಮಕ್ಕಳಿಗೆ ಕೃಷ್ಣ ವೇಷ ಹಾಕಿ, ಫೋಟೋಗಳನ್ನು ಫೇಸ್ಬುಕ್ ನಲ್ಲಿ ಹಾಕ್ಕೊಂಡಿದ್ದರೆ ಈ ಕ್ರಿಸ್ತಿಯನ್ ಯುವತಿ ಉದ್ದೇಶಪೂರ್ವಕವಾಗೇ ತನ್ನ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ತಲೆಗೆ ನವಿಲಿನ ಗರಿ, ಸೊಂಟಕ್ಕೆ ಕೊಳಲನ್ನು ಸಿಕ್ಕಿಸಿಕೊಂಡಿರುವ ಫೋಟೊಗಳನ್ನು ತನ್ನ ಇನ್ ಸ್ಟಾ ಗ್ರಾಮಿನಲ್ಲಿ ಪೋಸ್ಟ್ ಮಾಡಿದ್ದಾಳೆ.

ಈ ಫೋಟೊಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಭಾರೀ ಆಕ್ರೋಶ ಕೇಳಿಬಂದಿದೆ. ತನ್ನ ಪೋಸ್ಟ್ ವೈರಲ್ ಆಗಿ ವಿರೋಧ ಕೇಳಿಬರುತ್ತಿದ್ದಂತೆ ಜೋಶಿಲ್ ಲೋಬೊ ಪೋಸ್ಟನ್ನು ಡಿಲೀಟ್ ಮಾಡಿದ್ದಾಳೆ. ನಾಲ್ಕು ದಿನಗಳ ಹಿಂದೆ ಈಕೆ ಈ ಫೋಟೊಗಳನ್ನು ಪೋಸ್ಟ್ ಮಾಡಿದ್ದಾಳೆ ಎನ್ನಲಾಗ್ತಿದ್ದು ವಿರೋಧ ಬಂದ ಬಳಿಕ ಕ್ಷಮೆ ಯಾಚಿಸಿ ಹೇಳಿಕೆಯನ್ನೂ ಹಾಕಿದ್ದಳು. ಈಗ ಬೆಂಗಳೂರಿನಲ್ಲಿ ದೇವ ನಿಂದೆಯ ವಿಚಾರ ಹಿಂಸೆಯ ಕಿಡಿ ಎಬ್ಬಿಸುತ್ತಿದ್ದಂತೆ ಎಲ್ಲವನ್ನೂ ಡಿಲೀಟ್ ಮಾಡಿ ಕಣ್ಮರೆಯಾಗಿದ್ದಾಳೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm