ಬ್ರೇಕಿಂಗ್ ನ್ಯೂಸ್
17-01-21 07:10 pm Mangaluru Correspondent ಕರಾವಳಿ
ಕಾಸರಗೋಡು, ಜ.17: ಮಂಗಳೂರು - ತಿರುವನಂತಪುರಂ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಾಥಮಿಕ ತನಿಖೆ ಕೈಗೊಳ್ಳಲಾಗಿದ್ದು ಗೂಡ್ಸ್ ಬೋಗಿಯಲ್ಲಿ ತುಂಬಿಸಿದ್ದ ಎರಡು ಬೈಕಿನಿಂದ ಬೆಂಕಿ ಹತ್ತಿಕೊಂಡಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ಘಟನೆ ಸಂಬಂಧಿಸಿ ಕಾಸರಗೋಡು ರೈಲ್ವೇ ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಲಾಗಿದೆ. ಗೂಡ್ಸ್ ಬೋಗಿಗೆ ದ್ವಿಚಕ್ರ ವಾಹನಗಳನ್ನು ತುಂಬಿಸುವ ವೇಳೆ ತಪಾಸಣೆ ಮಾಡುವಲ್ಲಿ ಅಧಿಕಾರಿಗಳು ವಿಫಲವಾಗಿರುವುದನ್ನು ತನಿಖೆಯಲ್ಲಿ ಪತ್ತೆ ಮಾಡಲಾಗಿದೆ.

ಕಾಸರಗೋಡು ರೈಲ್ವೇ ನಿಲ್ದಾಣದಿಂದ ಎರಡು ಬೈಕ್ ಗಳನ್ನು ಲೋಡ್ ಮಾಡಿದ್ದು ಅದನ್ನು ತಿರುವನಂತಪುರ ಸಮೀಪದ ಪಾರಶಾಲಾ ಎಂಬಲ್ಲಿಗೆ ಒಯ್ಯಲಾಗುತ್ತಿತ್ತು. ಆದರೆ, ಬೈಕನ್ನು ರೈಲಿಗೆ ಲೋಡ್ ಮಾಡುವ ಮೊದಲು ಅದರಲ್ಲಿ ಪೆಟ್ರೋಲ್ ಟ್ಯಾಂಕ್ ಪೂರ್ತಿ ಖಾಲಿ ಮಾಡಿರಬೇಕೆಂಬ ನಿಯಮ ಇದೆ. ಬೈಕಿನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ಮೂಡಿರುವುದರಿಂದ ರೈಲ್ವೇ ಸಿಬಂದಿ ಲೋಡಿಂಗ್ ವೇಳೆ ಪರಿಶೀಲನೆ ನಡೆಸಿಲ್ಲ ಎಂಬುದು ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಹೀಗಾಗಿ ಪ್ರಾಥಮಿಕ ತನಿಖೆಯಲ್ಲೇ ರೈಲು ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಸಸ್ಪೆಂಡ್ ಮಾಡಿ, ಪಾಲಕ್ಕಾಡ್ ರೈಲ್ವೇ ವಿಭಾಗ ಆದೇಶ ಮಾಡಿದೆ.
ಮಂಗಳೂರಿನಿಂದ ತಿರುವನಂತಪುರಕ್ಕೆ ಸಾಗುತ್ತಿದ್ದ ಮಲಬಾರ್ ಎಕ್ಸ್ಪ್ರೆಸ್ ರೈಲು ಕೊನೆ ನಿಲ್ದಾಣ ತಲುಪುವುದಕ್ಕೆ 40 ಕಿಮೀ ದೂರ ಇರುವಾಗ ಇಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ವರ್ಕಳ ಎಂಬಲ್ಲಿ ಗೂಡ್ಸ್ ಬೋಗಿಗೆ ಬೆಂಕಿ ಹತ್ತಿಕೊಂಡಿತ್ತು. ಗೂಡ್ಸ್ ಬೋಗಿಯಾಗಿದ್ದರಿಂದ ಸಾವು ನೋವು ಸಂಭವಿಸಿರಲಿಲ್ಲ. ಹಿಂಭಾಗದ ಬೋಗಿಗೆ ಬೆಂಕಿ ಹತ್ತಿಕೊಂಡಿದ್ದನ್ನು ತಿಳಿದ ಪ್ರಯಾಣಿಕರು ಚೈನ್ ಎಳೆದು ರೈಲು ನಿಲ್ಲಿಸಿದ್ದರು. ಬಳಿಕ ಇತರೇ ಬೋಗಿಗಳಿಗೆ ಬೆಂಕಿ ಹರಡದಂತೆ ಬೆಂಕಿ ನಂದಿಸಲಾಗಿತ್ತು.
Also Read: ಮಂಗಳೂರು - ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ
Bikes that were loaded in the goods bogie caused the major train mishap of a fire in a moving train from Mangaluru to Thiruvananthapuram on Sunday in Kasargod.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm