ಬ್ರೇಕಿಂಗ್ ನ್ಯೂಸ್
17-01-21 07:10 pm Mangaluru Correspondent ಕರಾವಳಿ
ಕಾಸರಗೋಡು, ಜ.17: ಮಂಗಳೂರು - ತಿರುವನಂತಪುರಂ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಾಥಮಿಕ ತನಿಖೆ ಕೈಗೊಳ್ಳಲಾಗಿದ್ದು ಗೂಡ್ಸ್ ಬೋಗಿಯಲ್ಲಿ ತುಂಬಿಸಿದ್ದ ಎರಡು ಬೈಕಿನಿಂದ ಬೆಂಕಿ ಹತ್ತಿಕೊಂಡಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ಘಟನೆ ಸಂಬಂಧಿಸಿ ಕಾಸರಗೋಡು ರೈಲ್ವೇ ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಲಾಗಿದೆ. ಗೂಡ್ಸ್ ಬೋಗಿಗೆ ದ್ವಿಚಕ್ರ ವಾಹನಗಳನ್ನು ತುಂಬಿಸುವ ವೇಳೆ ತಪಾಸಣೆ ಮಾಡುವಲ್ಲಿ ಅಧಿಕಾರಿಗಳು ವಿಫಲವಾಗಿರುವುದನ್ನು ತನಿಖೆಯಲ್ಲಿ ಪತ್ತೆ ಮಾಡಲಾಗಿದೆ.

ಕಾಸರಗೋಡು ರೈಲ್ವೇ ನಿಲ್ದಾಣದಿಂದ ಎರಡು ಬೈಕ್ ಗಳನ್ನು ಲೋಡ್ ಮಾಡಿದ್ದು ಅದನ್ನು ತಿರುವನಂತಪುರ ಸಮೀಪದ ಪಾರಶಾಲಾ ಎಂಬಲ್ಲಿಗೆ ಒಯ್ಯಲಾಗುತ್ತಿತ್ತು. ಆದರೆ, ಬೈಕನ್ನು ರೈಲಿಗೆ ಲೋಡ್ ಮಾಡುವ ಮೊದಲು ಅದರಲ್ಲಿ ಪೆಟ್ರೋಲ್ ಟ್ಯಾಂಕ್ ಪೂರ್ತಿ ಖಾಲಿ ಮಾಡಿರಬೇಕೆಂಬ ನಿಯಮ ಇದೆ. ಬೈಕಿನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ಮೂಡಿರುವುದರಿಂದ ರೈಲ್ವೇ ಸಿಬಂದಿ ಲೋಡಿಂಗ್ ವೇಳೆ ಪರಿಶೀಲನೆ ನಡೆಸಿಲ್ಲ ಎಂಬುದು ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಹೀಗಾಗಿ ಪ್ರಾಥಮಿಕ ತನಿಖೆಯಲ್ಲೇ ರೈಲು ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಸಸ್ಪೆಂಡ್ ಮಾಡಿ, ಪಾಲಕ್ಕಾಡ್ ರೈಲ್ವೇ ವಿಭಾಗ ಆದೇಶ ಮಾಡಿದೆ.
ಮಂಗಳೂರಿನಿಂದ ತಿರುವನಂತಪುರಕ್ಕೆ ಸಾಗುತ್ತಿದ್ದ ಮಲಬಾರ್ ಎಕ್ಸ್ಪ್ರೆಸ್ ರೈಲು ಕೊನೆ ನಿಲ್ದಾಣ ತಲುಪುವುದಕ್ಕೆ 40 ಕಿಮೀ ದೂರ ಇರುವಾಗ ಇಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ವರ್ಕಳ ಎಂಬಲ್ಲಿ ಗೂಡ್ಸ್ ಬೋಗಿಗೆ ಬೆಂಕಿ ಹತ್ತಿಕೊಂಡಿತ್ತು. ಗೂಡ್ಸ್ ಬೋಗಿಯಾಗಿದ್ದರಿಂದ ಸಾವು ನೋವು ಸಂಭವಿಸಿರಲಿಲ್ಲ. ಹಿಂಭಾಗದ ಬೋಗಿಗೆ ಬೆಂಕಿ ಹತ್ತಿಕೊಂಡಿದ್ದನ್ನು ತಿಳಿದ ಪ್ರಯಾಣಿಕರು ಚೈನ್ ಎಳೆದು ರೈಲು ನಿಲ್ಲಿಸಿದ್ದರು. ಬಳಿಕ ಇತರೇ ಬೋಗಿಗಳಿಗೆ ಬೆಂಕಿ ಹರಡದಂತೆ ಬೆಂಕಿ ನಂದಿಸಲಾಗಿತ್ತು.
Also Read: ಮಂಗಳೂರು - ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ
Bikes that were loaded in the goods bogie caused the major train mishap of a fire in a moving train from Mangaluru to Thiruvananthapuram on Sunday in Kasargod.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm