ಬ್ರೇಕಿಂಗ್ ನ್ಯೂಸ್
17-01-21 07:10 pm Mangaluru Correspondent ಕರಾವಳಿ
ಕಾಸರಗೋಡು, ಜ.17: ಮಂಗಳೂರು - ತಿರುವನಂತಪುರಂ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಾಥಮಿಕ ತನಿಖೆ ಕೈಗೊಳ್ಳಲಾಗಿದ್ದು ಗೂಡ್ಸ್ ಬೋಗಿಯಲ್ಲಿ ತುಂಬಿಸಿದ್ದ ಎರಡು ಬೈಕಿನಿಂದ ಬೆಂಕಿ ಹತ್ತಿಕೊಂಡಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ಘಟನೆ ಸಂಬಂಧಿಸಿ ಕಾಸರಗೋಡು ರೈಲ್ವೇ ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಲಾಗಿದೆ. ಗೂಡ್ಸ್ ಬೋಗಿಗೆ ದ್ವಿಚಕ್ರ ವಾಹನಗಳನ್ನು ತುಂಬಿಸುವ ವೇಳೆ ತಪಾಸಣೆ ಮಾಡುವಲ್ಲಿ ಅಧಿಕಾರಿಗಳು ವಿಫಲವಾಗಿರುವುದನ್ನು ತನಿಖೆಯಲ್ಲಿ ಪತ್ತೆ ಮಾಡಲಾಗಿದೆ.

ಕಾಸರಗೋಡು ರೈಲ್ವೇ ನಿಲ್ದಾಣದಿಂದ ಎರಡು ಬೈಕ್ ಗಳನ್ನು ಲೋಡ್ ಮಾಡಿದ್ದು ಅದನ್ನು ತಿರುವನಂತಪುರ ಸಮೀಪದ ಪಾರಶಾಲಾ ಎಂಬಲ್ಲಿಗೆ ಒಯ್ಯಲಾಗುತ್ತಿತ್ತು. ಆದರೆ, ಬೈಕನ್ನು ರೈಲಿಗೆ ಲೋಡ್ ಮಾಡುವ ಮೊದಲು ಅದರಲ್ಲಿ ಪೆಟ್ರೋಲ್ ಟ್ಯಾಂಕ್ ಪೂರ್ತಿ ಖಾಲಿ ಮಾಡಿರಬೇಕೆಂಬ ನಿಯಮ ಇದೆ. ಬೈಕಿನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ಮೂಡಿರುವುದರಿಂದ ರೈಲ್ವೇ ಸಿಬಂದಿ ಲೋಡಿಂಗ್ ವೇಳೆ ಪರಿಶೀಲನೆ ನಡೆಸಿಲ್ಲ ಎಂಬುದು ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಹೀಗಾಗಿ ಪ್ರಾಥಮಿಕ ತನಿಖೆಯಲ್ಲೇ ರೈಲು ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಸಸ್ಪೆಂಡ್ ಮಾಡಿ, ಪಾಲಕ್ಕಾಡ್ ರೈಲ್ವೇ ವಿಭಾಗ ಆದೇಶ ಮಾಡಿದೆ.
ಮಂಗಳೂರಿನಿಂದ ತಿರುವನಂತಪುರಕ್ಕೆ ಸಾಗುತ್ತಿದ್ದ ಮಲಬಾರ್ ಎಕ್ಸ್ಪ್ರೆಸ್ ರೈಲು ಕೊನೆ ನಿಲ್ದಾಣ ತಲುಪುವುದಕ್ಕೆ 40 ಕಿಮೀ ದೂರ ಇರುವಾಗ ಇಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ವರ್ಕಳ ಎಂಬಲ್ಲಿ ಗೂಡ್ಸ್ ಬೋಗಿಗೆ ಬೆಂಕಿ ಹತ್ತಿಕೊಂಡಿತ್ತು. ಗೂಡ್ಸ್ ಬೋಗಿಯಾಗಿದ್ದರಿಂದ ಸಾವು ನೋವು ಸಂಭವಿಸಿರಲಿಲ್ಲ. ಹಿಂಭಾಗದ ಬೋಗಿಗೆ ಬೆಂಕಿ ಹತ್ತಿಕೊಂಡಿದ್ದನ್ನು ತಿಳಿದ ಪ್ರಯಾಣಿಕರು ಚೈನ್ ಎಳೆದು ರೈಲು ನಿಲ್ಲಿಸಿದ್ದರು. ಬಳಿಕ ಇತರೇ ಬೋಗಿಗಳಿಗೆ ಬೆಂಕಿ ಹರಡದಂತೆ ಬೆಂಕಿ ನಂದಿಸಲಾಗಿತ್ತು.
Also Read: ಮಂಗಳೂರು - ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ
Bikes that were loaded in the goods bogie caused the major train mishap of a fire in a moving train from Mangaluru to Thiruvananthapuram on Sunday in Kasargod.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm