ಬ್ರೇಕಿಂಗ್ ನ್ಯೂಸ್
18-01-21 04:50 pm Mangalore Correspondent ಕರಾವಳಿ
ಉಳ್ಳಾಲ, ಜ. 18: ಸೋಮೇಶ್ವರ ಕಡಲ ತೀರದಲ್ಲಿ ಕಡಲು ಪಾಲಾಗುತ್ತಿದ್ದ ಅನೇಕ ಪ್ರವಾಸಿಗರನ್ನು ಜೀವದ ಹಂಗು ತೊರೆದು ರಕ್ಷಿಸುತ್ತಿರುವ ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿ ಅಶೋಕ್ ಸೋಮೇಶ್ವರ ಅವರನ್ನು ಸರಕಾರವು ಗುರುತಿಸಿ, ಪ್ರಶಸ್ತಿ ನೀಡಬೇಕು. ಈ ಬಗ್ಗೆ ಸಚಿವರು, ಸಂಸದರಲ್ಲಿ ಮಾತುಕತೆ ನಡೆಸುವುದಾಗಿ ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದರು.
ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿ ಅಶೋಕ್ ಸೋಮೇಶ್ವರ ಅವರನ್ನು ತೊಕ್ಕೊಟ್ಟಿನ ಸಾಯಿ ಪರಿವಾರ್ ಟ್ರಸ್ಟ್ ವತಿಯಿಂದ ಸೋಮೇಶ್ವರ ಕಡಲ ತೀರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸಾಯಿ ಪರಿವಾರ್ ಟ್ರಸ್ಟ್ ಮಾರ್ಗದರ್ಶಕರಾದ ಚಂದ್ರಹಾಸ್ ಪಂಡಿತ್ ಹೌಸ್ ಮಾತನಾಡಿ ಯಾವುದೇ ಫಲಾಪೇಕ್ಷೆ ಇಲ್ಲದೆ ಪ್ರಾಣದ ಹಂಗು ತೊರೆದು ಪ್ರವಾಸಿಗರ ಪ್ರಾಣ ರಕ್ಷಣೆ ಮಾಡುವ ಸೇವೆಯನ್ನು ಮಾಡುತ್ತಾ ಬಂದಿರುವ ಅಶೋಕ್ ಸೋಮೇಶ್ವರ ಅವರ ಕಾರ್ಯ ಶ್ಲಾಘನೀಯ. ಸರಕಾರಿ ಸಂಬಳವಿಲ್ಲದಿದ್ದರೂ ಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ಅಶೋಕ್ ಅವರನ್ನು ಸರಕಾರ ಗುರುತಿಸುವ ಅಗತ್ಯವಿದೆ. ಈ ಬಗ್ಗೆ ಸಚಿವರು, ಸಂಸದರಲ್ಲಿ ಮಾತುಕತೆ ನಡೆಸುವುದಾಗಿ ಹೇಳಿದರು.
ಸನ್ಮಾನ ಸ್ವೀಕರಿಸಿದ ಅಶೋಕ್ ಸೋಮೇಶ್ವರ ಮಾತನಾಡಿ ಸೇವೆಯಲ್ಲಿ ಯಾವುದೇ ಫಲಾಪೇಕ್ಷೆ ಇರಬಾರದು. ಫಲಾಪೇಕ್ಷೆ ಬಯಸಿದವ ಸೇವಕನಾಗಲು ಸಾಧ್ಯವಿಲ್ಲ. ಅನೇಕ ವೇದಿಕೆಗಳಲ್ಲಿ ಸನ್ಮಾನ ಪಡೆದಿದ್ದರೂ ಕಡಲ ತೀರದಲ್ಲೇ ಪಡೆದ ಈ ಸನ್ಮಾನ ಎಂದಿಗೂ ಮರೆಯಲು ಸಾಧ್ಯವಿಲ್ಲವೆಂದರು.
ಅಡ್ಕ ಭಗವತಿ ಕ್ಷೇತ್ರದ ಅರ್ಚಕ ವಸಂತ್ ಉಚ್ಚಿಲ್, ಸಾಯಿ ಪರಿವಾರ್ ಟ್ರಸ್ಟ್ ನ ಪ್ರವೀಣ್ ಎಸ್. ಕುಂಪಲ, ಪುರುಷೋತ್ತಮ್ ಕಲ್ಲಾಪು, ಶವಿತ್ ಉಚ್ಚಿಲ್, ಕಲಾವಿದ ಜೆ.ಪಿ ಆಚಾರ್ಯ, ಸತೀಶ್ ಭಟ್ನಗರ, ರವಿಶಂಕರ್ ಸೋಮೇಶ್ವರ, ರಮೇಶ್ ಕೊಂಡಾಣ, ಜಯಂತ್ ಕಾಪಿಕಾಡ್, ಕಿಶೋರ್ ಮಂಚಿ, ವಿಶ್ವನಾಥ್ ಮಂಚಿ, ಸೂರ್ಯ ಕುಂಪಲ, ಪ್ರವೀಣ್ ಮೆಸ್ಕಾಂ, ಸುಖೇಶ್ ಉಚ್ಚಿಲ್ ಮೊದಲಾದವರು ಇದ್ದರು.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm