ಬ್ರೇಕಿಂಗ್ ನ್ಯೂಸ್
18-01-21 06:39 pm Mangalore Correspondent ಕರಾವಳಿ
ಮಂಗಳೂರು, ಜ.18: ಆರು ತಿಂಗಳ ಹಿಂದೆ ಕೇಂದ್ರ ಗುಪ್ತಚರ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದ್ದ ಸ್ಯಾಟಲೈಟ್ ಫೋನ್ ಕರಾವಳಿಯಲ್ಲಿ ಮತ್ತೆ ಆಕ್ಟಿವ್ ಆಗಿರುವ ವಿಚಾರ ಬೆಳಕಿಗೆ ಬಂದಿದೆ.
ಗುಪ್ತಚರ ಅಧಿಕಾರಿಗಳು, ಸ್ಥಳೀಯ ಪೊಲೀಸರು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕಾರ್ಯಾಚರಣೆ ನಡೆಸಿದ ಬಳಿಕ ಕಳೆದ ಆರು ತಿಂಗಳಿಂದಲೂ ಸ್ಯಾಟಲೈಟ್ ಫೋನ್ ಗಳು ಸೈಲೆಂಟಾಗಿದ್ದವು. ಇದೀಗ ಕರಾವಳಿಯ ದಟ್ಟಾರಣ್ಯ ಪ್ರದೇಶಗಳಲ್ಲಿ ಮತ್ತೆ ಸ್ಯಾಟ್ ಲೈಟ್ ಫೋನ್ ರಿಂಗಣಿಸಿದೆ. ಕಳೆದ 10 ದಿನಗಳಲ್ಲಿ ಮೂರು ಬಾರಿ ಆಕ್ಟಿವ್ ಆಗಿದ್ದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ದಟ್ಟಾರಣ್ಯ ಪ್ರದೇಶದಲ್ಲಿ ಫೋನ್ ಸಕ್ರಿಯವಾಗಿರುವ ಬಗ್ಗೆ ಲೊಕೇಷನ್ ಟ್ರೇಸ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನಕಮಜಲು ಎಂಬಲ್ಲಿ ಲೊಕೇಶನ್ ಕಂಡುಬಂದಿದ್ದು ಆ ಜಾಗದಲ್ಲಿ ಯಾರೋ ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವುದನ್ನು ಪತ್ತೆ ಮಾಡಲಾಗಿದೆ. ಗುಪ್ತಚರ ಏಜೆನ್ಸಿ 'ರಾ' ಸಂಸ್ಥೆಯ ಅಧಿಕಾರಿಗಳು ಸ್ಯಾಟಲೈಟ್ ಫೋನ್ ಆ್ಯಕ್ಟಿವ್ ಆಗಿರುವುದನ್ನು ಪತ್ತೆ ಮಾಡಿ ರಾಜ್ಯ ಗುಪ್ತಚರ ಇಲಾಖೆಗೆ ಸಂದೇಶ ರವಾನಿಸಿದ್ದಾರೆ.

ಭಾರತದಲ್ಲಿ ನಿಷೇಧಿಸಲಾಗಿರುವ ತುರಾಯಾ ಸ್ಯಾಟಲೈಟ್ ಫೋನ್ ನಿಂದ ನಿಗೂಢ ವ್ಯಕ್ತಿಗಳ ಜೊತೆ ಸಂಪರ್ಕ ಸಾಧಿಸಿದ್ದನ್ನು ಪತ್ತೆ ಮಾಡಲಾಗಿದೆ. ಕೇಂದ್ರ ಇಂಟೆಲಿಜೆನ್ಸ್ ಅಧಿಕಾರಿಗಳ ಸೂಚನೆಯಂತೆ ರಾಜ್ಯ ಗುಪ್ತಚರ ಇಲಾಖೆಯಿಂದ ಈಗ ತನಿಖೆ ಆರಂಭಿಸಲಾಗಿದೆ. ಸ್ಯಾಟಲೈಟ್ ಫೋನ್ ಗಳನ್ನು ನಿಷೇಧಿಸಿರುವುದರಿಂದ ಉಗ್ರವಾದಿ ಚಟುವಟಿಕೆ ನಿರತರು ಈ ಫೋನ್ ಬಳಕೆ ಮಾಡಿರುವ ಸಾಧ್ಯತೆ ಕಂಡುಬಂದಿದೆ. ಹೀಗಾಗಿ ಸದ್ದಿಲ್ಲದ ರೀತಿ ಕರಾವಳಿಯ ಸ್ಲೀಪರ್ ಸೆಲ್ ಗಳು ಮತ್ತೆ ಆಕ್ಟಿವ್ ಆಗಿರುವ ಬಗ್ಗೆ ಶಂಕೆ ಮೂಡುತ್ತಿದೆ.
ಒಂದು ವರ್ಷದ ಹಿಂದೆ ಧರ್ಮಸ್ಥಳ ಬಳಿ ಸ್ಯಾಟಲೈಟ್ ಫೋನ್ ಬಳಕೆ ಆಗಿದ್ದನ್ನು ಪತ್ತೆ ಮಾಡಲಾಗಿತ್ತು. ಗುಪ್ತಚರ ಅಧಿಕಾರಿಗಳು ಅಲ್ಲಿಗೆ ತೆರಳಿ, ತನಿಖೆ ಕೈಗೊಂಡಿದ್ದರು. ಆದರೆ, ಯಾವುದೇ ಮಾಹಿತಿ ಪೊಲೀಸರಿಗೆ ಲಭಿಸಿರಲಿಲ್ಲ. ಸ್ಯಾಟಲೈಟ್ ಫೋನ್ ಆ್ಯಕ್ಟಿವ್ ಆದರೂ ಅದನ್ನು ಪತ್ತೆ ಮಾಡಲು ಸಾಧ್ಯವಾಗದಿರುವುದು ಪೊಲೀಸರ ತಲೆನೋವಿಗೆ ಕಾರಣವಾಗಿತ್ತು. ಇದೀಗ ಮತ್ತೆ ಅಂಥದ್ದೇ ಸನ್ನಿವೇಶ ಸೃಷ್ಟಿಯಾಗಿದ್ದು ಪೊಲೀಸರ ನಿದ್ದೆಗೆಡಿಸಿದೆ.
Satellite phones activate once again In Mangalore and coastal areas Inform I sources to inform high sources.
07-04-26 12:37 pm
HK News Staffer
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm