ಬ್ರೇಕಿಂಗ್ ನ್ಯೂಸ್
19-01-21 03:22 pm Mangalore Correspondent ಕರಾವಳಿ
ಮಂಗಳೂರು, ಜ.19: ಉಳ್ಳಾಲದ ಎಸ್ ಡಿಪಿಐ ಮುಖಂಡ ಮಹಿಳೆ ಮತ್ತು ಆಕೆಯ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಘಟನೆಯ ತನಿಖೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಮಿಷನರ್, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪೋಕ್ಸೋ ಮತ್ತು ಮಹಿಳೆಗೆ ಕಿರುಕುಳ ನೀಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿಯ ಪತ್ತೆಗೆ ಎರಡು ತಂಡಗಳನ್ನು ರಚಿಸಿದ್ದೇವೆ. ಆರೋಪಿ ಕೇರಳಕ್ಕೆ ಪರಾರಿಯಾಗಿರುವ ಶಂಕೆಯಿದ್ದು, ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಅಲ್ಲದೆ, ಮಹಿಳೆಯನ್ನು ದೂರು ನೀಡದಂತೆ ಕೆಲವು ಸಮುದಾಯದ ಮುಖಂಡರು ಒತ್ತಡ ಹೇರಿದ ಬಗ್ಗೆಯೂ ಮಹಿಳೆ ದೂರು ನೀಡಿದ್ದಾರೆ. ಮಹಿಳೆ ಮತ್ತು ಮಕ್ಕಳನ್ನು ಸತತವಾಗಿ ಪೀಡಿಸಿದ ಬಗ್ಗೆ ದೂರು ಲಭಿಸಿತ್ತು. ಕೊನೆಯ ಬಾರಿಗೆ ಕಳೆದ ಡಿ.25ರಂದು ಆತ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಆಕೆಯೇ ಸ್ವತಃ ಮುಂದೆ ಬಂದು ದೂರು ದಾಖಲಿಸಿದ್ದಾರೆ. ಮಹಿಳೆ ಮತ್ತು ಮಕ್ಕಳನ್ನು ಚೈಲ್ಡ್ ಕೇರ್ ಸಂಸ್ಥೆಯವರು ಪರಿಶೀಲನೆ ನಡೆಸಿದ್ದು, ಕಿರುಕುಳ ಆಗಿರುವ ಬಗ್ಗೆ ದೃಢಪಟ್ಟ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.
ನಮಗೆ ಅಪರಾಧ ಮತ್ತು ಅಪರಾಧಿಗಳನ್ನು ಪತ್ತೆ ಮಾಡುವುದಷ್ಟೇ ಮುಖ್ಯ. ಅವರು ಯಾವ ಸಂಘಟನೆಯವರು, ರಾಜಕೀಯ ಪಕ್ಷದಲ್ಲಿ ಇದ್ದಾರೆಯೇ ಎಂಬ ಬಗ್ಗೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಅದರ ಅಗತ್ಯವೂ ಇಲ್ಲ. ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ತಿಳಿಸಿದರು.
ಎಸ್ ಡಿಪಿಎಐ ಉಳ್ಳಾಲ ಸಮಿತಿ ಅಧ್ಯಕ್ಷ ಸಿದ್ದೀಕ್ ಉಳ್ಳಾಲ್ ಎಂಬಾತ ಈ ದುಷ್ಕೃತ್ಯ ಎಸಗಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ಮೊದಲ ಬಾರಿಗೆ ಸುದ್ದಿ ಪ್ರಕಟಿಸಿ ಪ್ರಕರಣ ಬಯಲಿಗೆ ತಂದಿತ್ತು ಎಂಬುದನ್ನು ಸ್ಮರಿಸಬಹುದು.
Video:
A special team has been formed to arrest SDPI leader Sadiq from Ullal who has been alleged of sexual harassment on women and her two children.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm