ಬ್ರೇಕಿಂಗ್ ನ್ಯೂಸ್
19-01-21 03:22 pm Mangalore Correspondent ಕರಾವಳಿ
ಮಂಗಳೂರು, ಜ.19: ಉಳ್ಳಾಲದ ಎಸ್ ಡಿಪಿಐ ಮುಖಂಡ ಮಹಿಳೆ ಮತ್ತು ಆಕೆಯ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಘಟನೆಯ ತನಿಖೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಮಿಷನರ್, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪೋಕ್ಸೋ ಮತ್ತು ಮಹಿಳೆಗೆ ಕಿರುಕುಳ ನೀಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿಯ ಪತ್ತೆಗೆ ಎರಡು ತಂಡಗಳನ್ನು ರಚಿಸಿದ್ದೇವೆ. ಆರೋಪಿ ಕೇರಳಕ್ಕೆ ಪರಾರಿಯಾಗಿರುವ ಶಂಕೆಯಿದ್ದು, ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಅಲ್ಲದೆ, ಮಹಿಳೆಯನ್ನು ದೂರು ನೀಡದಂತೆ ಕೆಲವು ಸಮುದಾಯದ ಮುಖಂಡರು ಒತ್ತಡ ಹೇರಿದ ಬಗ್ಗೆಯೂ ಮಹಿಳೆ ದೂರು ನೀಡಿದ್ದಾರೆ. ಮಹಿಳೆ ಮತ್ತು ಮಕ್ಕಳನ್ನು ಸತತವಾಗಿ ಪೀಡಿಸಿದ ಬಗ್ಗೆ ದೂರು ಲಭಿಸಿತ್ತು. ಕೊನೆಯ ಬಾರಿಗೆ ಕಳೆದ ಡಿ.25ರಂದು ಆತ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಆಕೆಯೇ ಸ್ವತಃ ಮುಂದೆ ಬಂದು ದೂರು ದಾಖಲಿಸಿದ್ದಾರೆ. ಮಹಿಳೆ ಮತ್ತು ಮಕ್ಕಳನ್ನು ಚೈಲ್ಡ್ ಕೇರ್ ಸಂಸ್ಥೆಯವರು ಪರಿಶೀಲನೆ ನಡೆಸಿದ್ದು, ಕಿರುಕುಳ ಆಗಿರುವ ಬಗ್ಗೆ ದೃಢಪಟ್ಟ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.
ನಮಗೆ ಅಪರಾಧ ಮತ್ತು ಅಪರಾಧಿಗಳನ್ನು ಪತ್ತೆ ಮಾಡುವುದಷ್ಟೇ ಮುಖ್ಯ. ಅವರು ಯಾವ ಸಂಘಟನೆಯವರು, ರಾಜಕೀಯ ಪಕ್ಷದಲ್ಲಿ ಇದ್ದಾರೆಯೇ ಎಂಬ ಬಗ್ಗೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಅದರ ಅಗತ್ಯವೂ ಇಲ್ಲ. ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ತಿಳಿಸಿದರು.
ಎಸ್ ಡಿಪಿಎಐ ಉಳ್ಳಾಲ ಸಮಿತಿ ಅಧ್ಯಕ್ಷ ಸಿದ್ದೀಕ್ ಉಳ್ಳಾಲ್ ಎಂಬಾತ ಈ ದುಷ್ಕೃತ್ಯ ಎಸಗಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ಮೊದಲ ಬಾರಿಗೆ ಸುದ್ದಿ ಪ್ರಕಟಿಸಿ ಪ್ರಕರಣ ಬಯಲಿಗೆ ತಂದಿತ್ತು ಎಂಬುದನ್ನು ಸ್ಮರಿಸಬಹುದು.
Video:
A special team has been formed to arrest SDPI leader Sadiq from Ullal who has been alleged of sexual harassment on women and her two children.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 11:07 pm
Mangalore Correspondent
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am