ಬ್ರೇಕಿಂಗ್ ನ್ಯೂಸ್
20-01-21 07:54 pm Mangaluru Correspondent ಕರಾವಳಿ
ಮಂಗಳೂರು, ಜ.20: ಓವರ್ ಟೇಕ್ ಮಾಡುವ ನೆಪದಲ್ಲಿ 23 ನಂಬರ್ ರೂಟಿನ ಚಾಲಕರಾದ ಸಂಪತ್ ಪೂಜಾರಿಯನ್ನು ಪೆಟ್ರೋಲ್ ಸುರಿದು ಕೊಲೆ ಮಾಡಲು ಪ್ರಯತ್ನಿಸಿದ್ದು ಬಹಳ ಗಂಭೀರ ಪ್ರಕರಣವಾಗಿದ್ದು ಈ ಕೃತ್ಯವನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ಖಂಡಿಸಿದೆ.
ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರ ಹತ್ಯೆಯ ಯತ್ನ, NRC ಹೆಸರಿನಲ್ಲಿ ಗಲಭೆ, ಹನಿ ಟ್ರ್ಯಾಪ್, ಹಿಂದುಗಳ ಮೇಲೆ ಹಲ್ಲೆ ಮುಂತಾದ ಗಂಭೀರ ಪ್ರಕರಣಗಳು ನಡೆಯುತ್ತಿದ್ದು ಮುಂದುವರಿದ ಭಾಗವಾಗಿ ಬಸ್ ಚಾಲಕನಿಗೆ ಪೆಟ್ರೋಲ್ ಸುರಿದು ಹತ್ಯೆ ಮಾಡಲು ಪ್ರಯತ್ನಿಸಿದ್ದಾರೆ. ಇದನ್ನು ನೋಡುವಾಗ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಸಿ ನಾಗರಿಕರನ್ನು ಆತಂಕಗೊಳಿಸುತ್ತಿರುವುದು ಕಂಡುಬರುತ್ತಿದೆ ಎಂದು ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟು ಕೊಲೆಯತ್ನಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ಬಸ್ ಚಾಲಕ ಸಂಪತ್ ಪೂಜಾರಿಯನ್ನು ಭೇಟಿ ಮಾಡಿದ ವಿಶ್ವ ಹಿಂದು ಪರಿಷದ್ ಬಜರಂಗದಳದ ಪ್ರಮುಖರು, ಧೈರ್ಯ ತುಂಬಿದರು. ಅಲ್ಲದೆ, ಆರೋಪಿ ಅಶ್ರಫ್ ನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್, ವಿಶ್ವ ಹಿಂದು ಪರಿಷತ್ ಜಿಲ್ಲಾ ಗೋರಕ್ಷಾ ಪ್ರಮುಖ್ ಪ್ರದೀಪ್ ಪಂಪವೆಲ್, ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಮತ್ತು ನಾಗುರಿ ಪ್ರಖಂಡ ಕಾರ್ಯದರ್ಶಿ ಶರತ್ ಕೆಂಬಾರ್ ಉಪಸ್ಥಿತರಿದ್ದರು.
Also Read: ಸಿಟಿ ಬಸ್ ಚಾಲಕನ ಜೊತೆ ಜಟಾಪಟಿ ; ಬೈಕ್ ಸವಾರನಿಂದ ಪೆಟ್ರೋಲ್ ಸ್ಪ್ರೇ !!
Vhp Demands arrest of the biker who poured petrol on a private bus driver at Faisal Nagar near Padil following an argument on Tuesday, January 19.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm