ಬ್ರೇಕಿಂಗ್ ನ್ಯೂಸ್
20-01-21 07:54 pm Mangaluru Correspondent ಕರಾವಳಿ
ಮಂಗಳೂರು, ಜ.20: ಓವರ್ ಟೇಕ್ ಮಾಡುವ ನೆಪದಲ್ಲಿ 23 ನಂಬರ್ ರೂಟಿನ ಚಾಲಕರಾದ ಸಂಪತ್ ಪೂಜಾರಿಯನ್ನು ಪೆಟ್ರೋಲ್ ಸುರಿದು ಕೊಲೆ ಮಾಡಲು ಪ್ರಯತ್ನಿಸಿದ್ದು ಬಹಳ ಗಂಭೀರ ಪ್ರಕರಣವಾಗಿದ್ದು ಈ ಕೃತ್ಯವನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ಖಂಡಿಸಿದೆ.
ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರ ಹತ್ಯೆಯ ಯತ್ನ, NRC ಹೆಸರಿನಲ್ಲಿ ಗಲಭೆ, ಹನಿ ಟ್ರ್ಯಾಪ್, ಹಿಂದುಗಳ ಮೇಲೆ ಹಲ್ಲೆ ಮುಂತಾದ ಗಂಭೀರ ಪ್ರಕರಣಗಳು ನಡೆಯುತ್ತಿದ್ದು ಮುಂದುವರಿದ ಭಾಗವಾಗಿ ಬಸ್ ಚಾಲಕನಿಗೆ ಪೆಟ್ರೋಲ್ ಸುರಿದು ಹತ್ಯೆ ಮಾಡಲು ಪ್ರಯತ್ನಿಸಿದ್ದಾರೆ. ಇದನ್ನು ನೋಡುವಾಗ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಸಿ ನಾಗರಿಕರನ್ನು ಆತಂಕಗೊಳಿಸುತ್ತಿರುವುದು ಕಂಡುಬರುತ್ತಿದೆ ಎಂದು ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟು ಕೊಲೆಯತ್ನಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ಬಸ್ ಚಾಲಕ ಸಂಪತ್ ಪೂಜಾರಿಯನ್ನು ಭೇಟಿ ಮಾಡಿದ ವಿಶ್ವ ಹಿಂದು ಪರಿಷದ್ ಬಜರಂಗದಳದ ಪ್ರಮುಖರು, ಧೈರ್ಯ ತುಂಬಿದರು. ಅಲ್ಲದೆ, ಆರೋಪಿ ಅಶ್ರಫ್ ನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್, ವಿಶ್ವ ಹಿಂದು ಪರಿಷತ್ ಜಿಲ್ಲಾ ಗೋರಕ್ಷಾ ಪ್ರಮುಖ್ ಪ್ರದೀಪ್ ಪಂಪವೆಲ್, ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಮತ್ತು ನಾಗುರಿ ಪ್ರಖಂಡ ಕಾರ್ಯದರ್ಶಿ ಶರತ್ ಕೆಂಬಾರ್ ಉಪಸ್ಥಿತರಿದ್ದರು.
Also Read: ಸಿಟಿ ಬಸ್ ಚಾಲಕನ ಜೊತೆ ಜಟಾಪಟಿ ; ಬೈಕ್ ಸವಾರನಿಂದ ಪೆಟ್ರೋಲ್ ಸ್ಪ್ರೇ !!
Vhp Demands arrest of the biker who poured petrol on a private bus driver at Faisal Nagar near Padil following an argument on Tuesday, January 19.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am