ಬ್ರೇಕಿಂಗ್ ನ್ಯೂಸ್
20-01-21 07:54 pm Mangaluru Correspondent ಕರಾವಳಿ
ಮಂಗಳೂರು, ಜ.20: ಓವರ್ ಟೇಕ್ ಮಾಡುವ ನೆಪದಲ್ಲಿ 23 ನಂಬರ್ ರೂಟಿನ ಚಾಲಕರಾದ ಸಂಪತ್ ಪೂಜಾರಿಯನ್ನು ಪೆಟ್ರೋಲ್ ಸುರಿದು ಕೊಲೆ ಮಾಡಲು ಪ್ರಯತ್ನಿಸಿದ್ದು ಬಹಳ ಗಂಭೀರ ಪ್ರಕರಣವಾಗಿದ್ದು ಈ ಕೃತ್ಯವನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ಖಂಡಿಸಿದೆ.
ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರ ಹತ್ಯೆಯ ಯತ್ನ, NRC ಹೆಸರಿನಲ್ಲಿ ಗಲಭೆ, ಹನಿ ಟ್ರ್ಯಾಪ್, ಹಿಂದುಗಳ ಮೇಲೆ ಹಲ್ಲೆ ಮುಂತಾದ ಗಂಭೀರ ಪ್ರಕರಣಗಳು ನಡೆಯುತ್ತಿದ್ದು ಮುಂದುವರಿದ ಭಾಗವಾಗಿ ಬಸ್ ಚಾಲಕನಿಗೆ ಪೆಟ್ರೋಲ್ ಸುರಿದು ಹತ್ಯೆ ಮಾಡಲು ಪ್ರಯತ್ನಿಸಿದ್ದಾರೆ. ಇದನ್ನು ನೋಡುವಾಗ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಸಿ ನಾಗರಿಕರನ್ನು ಆತಂಕಗೊಳಿಸುತ್ತಿರುವುದು ಕಂಡುಬರುತ್ತಿದೆ ಎಂದು ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟು ಕೊಲೆಯತ್ನಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ಬಸ್ ಚಾಲಕ ಸಂಪತ್ ಪೂಜಾರಿಯನ್ನು ಭೇಟಿ ಮಾಡಿದ ವಿಶ್ವ ಹಿಂದು ಪರಿಷದ್ ಬಜರಂಗದಳದ ಪ್ರಮುಖರು, ಧೈರ್ಯ ತುಂಬಿದರು. ಅಲ್ಲದೆ, ಆರೋಪಿ ಅಶ್ರಫ್ ನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್, ವಿಶ್ವ ಹಿಂದು ಪರಿಷತ್ ಜಿಲ್ಲಾ ಗೋರಕ್ಷಾ ಪ್ರಮುಖ್ ಪ್ರದೀಪ್ ಪಂಪವೆಲ್, ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಮತ್ತು ನಾಗುರಿ ಪ್ರಖಂಡ ಕಾರ್ಯದರ್ಶಿ ಶರತ್ ಕೆಂಬಾರ್ ಉಪಸ್ಥಿತರಿದ್ದರು.
Also Read: ಸಿಟಿ ಬಸ್ ಚಾಲಕನ ಜೊತೆ ಜಟಾಪಟಿ ; ಬೈಕ್ ಸವಾರನಿಂದ ಪೆಟ್ರೋಲ್ ಸ್ಪ್ರೇ !!
Vhp Demands arrest of the biker who poured petrol on a private bus driver at Faisal Nagar near Padil following an argument on Tuesday, January 19.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am