ಬ್ರೇಕಿಂಗ್ ನ್ಯೂಸ್
20-01-21 09:49 pm Mangaluru Correspondent ಕರಾವಳಿ
ಕೊಣಾಜೆ, ಜ.20: ವಿದ್ಯುತ್ ಕಂಬಕ್ಕೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಪಿಕ್ ಅಪ್ ವಾಹನ ಡಿಕ್ಕಿಯಾದ ಪರಿಣಾಮ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದ್ದು , ಕೂದಲೆಲೆಯ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ಸಂಜೆ 4 ಗಂಟೆ ವೇಳೆಗೆ ಪಜೀರು ಗ್ರಾಮ ಪಂಚಾಯತ್ ಕಚೇರಿಯ ಹಿಂಬದಿ ರಸ್ತೆಯಲ್ಲಿ HP ಗ್ಯಾಸ್ ಸಿಲಿಂಡರ್ ಗಳನ್ನು ಗ್ರಾಹಕರಿಗೆ ವಿತರಿಸುತ್ತಿದ್ದ ಪಿಕ್ ಅಪ್ ವಾಹನವು ರಿವರ್ಸ್ ತೆಗೆಯುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಕಂಬವು ತುಂಡಾಗಿ ಪಿಕ್ ಅಪ್ ವಾಹನದ ಮೇಲೆ ಉರುಳಿ ಬಿದ್ದಿದ್ದು ವಿದ್ಯುತ್ ಲೈನ್ ಸಿಲಿಂಡರ್ ಮೇಲೆ ಬಿದ್ದಿತ್ತು. ಅಷ್ಟರಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಬೆಂಕಿ ಹತ್ತಿಕೊಳ್ಳುವುದರಿಂದ ತಪ್ಪಿದೆ. ಅವಘಡವನ್ನು ತಿಳಿಯದ ಮೆಸ್ಕಾಂ ಸಿಬ್ಬಂದಿ ಮತ್ತೆ ಪವರ್ ಆನ್ ಮಾಡಿದ್ದರ ಪರಿಣಾಮ ಬೆಂಕಿ ಹತ್ತಿದ್ದು ಸುತ್ತಮುತ್ತಲಿನ ಹುಲ್ಲುಗಾವಲಿಗೆ ಬೆಂಕಿ ಹತ್ತಿಕೊಂಡಿದೆ. ಮತ್ತೆ ವಿದ್ಯುತ್ ನಿಲುಗಡೆ ಆಗಿದ್ದು ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿ ನಂತರ ಬೆಂಕಿ ನಂದಿಸಿದ್ದಾರೆ.

ಪಿಕ್ ವಾಹನದ ಚಾಲಕ ಅಪಾಯ ಅರಿತು ಓಡಿದ್ದಾನೆ. ಅದೃಷ್ಟವಶಾತ್ ಪಿಕ್ ವಾಹನ ಮತ್ತು ಸಿಲಿಂಡರ್ ಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ವೇಳೆ ಗ್ಯಾಸ್ ಡೆಲಿವರಿ ಹುಡುಗ ಹತ್ತಿರದ ಮನೆಗೆ ಗ್ಯಾಸ್ ಹೊತ್ತು ಹೋಗಿದ್ದನೆನ್ನಲಾಗಿದೆ. ಬೆಂಕಿ ಹತ್ತಿಕೊಂಡ ಪ್ರದೇಶ ನಿರ್ಜನ ಪ್ರದೇಶವಾದುದರಿಂದ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.
HP Gas Cylinder pickup van rams into an electric pole in Pajir, Konaje in Mangalore. A great escape from a major catastrophe was avoided due to MESCOM workers.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm