ಬ್ರೇಕಿಂಗ್ ನ್ಯೂಸ್
20-01-21 09:49 pm Mangaluru Correspondent ಕರಾವಳಿ
ಕೊಣಾಜೆ, ಜ.20: ವಿದ್ಯುತ್ ಕಂಬಕ್ಕೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಪಿಕ್ ಅಪ್ ವಾಹನ ಡಿಕ್ಕಿಯಾದ ಪರಿಣಾಮ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದ್ದು , ಕೂದಲೆಲೆಯ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ಸಂಜೆ 4 ಗಂಟೆ ವೇಳೆಗೆ ಪಜೀರು ಗ್ರಾಮ ಪಂಚಾಯತ್ ಕಚೇರಿಯ ಹಿಂಬದಿ ರಸ್ತೆಯಲ್ಲಿ HP ಗ್ಯಾಸ್ ಸಿಲಿಂಡರ್ ಗಳನ್ನು ಗ್ರಾಹಕರಿಗೆ ವಿತರಿಸುತ್ತಿದ್ದ ಪಿಕ್ ಅಪ್ ವಾಹನವು ರಿವರ್ಸ್ ತೆಗೆಯುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಕಂಬವು ತುಂಡಾಗಿ ಪಿಕ್ ಅಪ್ ವಾಹನದ ಮೇಲೆ ಉರುಳಿ ಬಿದ್ದಿದ್ದು ವಿದ್ಯುತ್ ಲೈನ್ ಸಿಲಿಂಡರ್ ಮೇಲೆ ಬಿದ್ದಿತ್ತು. ಅಷ್ಟರಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಬೆಂಕಿ ಹತ್ತಿಕೊಳ್ಳುವುದರಿಂದ ತಪ್ಪಿದೆ. ಅವಘಡವನ್ನು ತಿಳಿಯದ ಮೆಸ್ಕಾಂ ಸಿಬ್ಬಂದಿ ಮತ್ತೆ ಪವರ್ ಆನ್ ಮಾಡಿದ್ದರ ಪರಿಣಾಮ ಬೆಂಕಿ ಹತ್ತಿದ್ದು ಸುತ್ತಮುತ್ತಲಿನ ಹುಲ್ಲುಗಾವಲಿಗೆ ಬೆಂಕಿ ಹತ್ತಿಕೊಂಡಿದೆ. ಮತ್ತೆ ವಿದ್ಯುತ್ ನಿಲುಗಡೆ ಆಗಿದ್ದು ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿ ನಂತರ ಬೆಂಕಿ ನಂದಿಸಿದ್ದಾರೆ.

ಪಿಕ್ ವಾಹನದ ಚಾಲಕ ಅಪಾಯ ಅರಿತು ಓಡಿದ್ದಾನೆ. ಅದೃಷ್ಟವಶಾತ್ ಪಿಕ್ ವಾಹನ ಮತ್ತು ಸಿಲಿಂಡರ್ ಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ವೇಳೆ ಗ್ಯಾಸ್ ಡೆಲಿವರಿ ಹುಡುಗ ಹತ್ತಿರದ ಮನೆಗೆ ಗ್ಯಾಸ್ ಹೊತ್ತು ಹೋಗಿದ್ದನೆನ್ನಲಾಗಿದೆ. ಬೆಂಕಿ ಹತ್ತಿಕೊಂಡ ಪ್ರದೇಶ ನಿರ್ಜನ ಪ್ರದೇಶವಾದುದರಿಂದ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.
HP Gas Cylinder pickup van rams into an electric pole in Pajir, Konaje in Mangalore. A great escape from a major catastrophe was avoided due to MESCOM workers.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm