ಬ್ರೇಕಿಂಗ್ ನ್ಯೂಸ್
20-01-21 09:49 pm Mangaluru Correspondent ಕರಾವಳಿ
ಕೊಣಾಜೆ, ಜ.20: ವಿದ್ಯುತ್ ಕಂಬಕ್ಕೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಪಿಕ್ ಅಪ್ ವಾಹನ ಡಿಕ್ಕಿಯಾದ ಪರಿಣಾಮ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದ್ದು , ಕೂದಲೆಲೆಯ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ಸಂಜೆ 4 ಗಂಟೆ ವೇಳೆಗೆ ಪಜೀರು ಗ್ರಾಮ ಪಂಚಾಯತ್ ಕಚೇರಿಯ ಹಿಂಬದಿ ರಸ್ತೆಯಲ್ಲಿ HP ಗ್ಯಾಸ್ ಸಿಲಿಂಡರ್ ಗಳನ್ನು ಗ್ರಾಹಕರಿಗೆ ವಿತರಿಸುತ್ತಿದ್ದ ಪಿಕ್ ಅಪ್ ವಾಹನವು ರಿವರ್ಸ್ ತೆಗೆಯುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಕಂಬವು ತುಂಡಾಗಿ ಪಿಕ್ ಅಪ್ ವಾಹನದ ಮೇಲೆ ಉರುಳಿ ಬಿದ್ದಿದ್ದು ವಿದ್ಯುತ್ ಲೈನ್ ಸಿಲಿಂಡರ್ ಮೇಲೆ ಬಿದ್ದಿತ್ತು. ಅಷ್ಟರಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಬೆಂಕಿ ಹತ್ತಿಕೊಳ್ಳುವುದರಿಂದ ತಪ್ಪಿದೆ. ಅವಘಡವನ್ನು ತಿಳಿಯದ ಮೆಸ್ಕಾಂ ಸಿಬ್ಬಂದಿ ಮತ್ತೆ ಪವರ್ ಆನ್ ಮಾಡಿದ್ದರ ಪರಿಣಾಮ ಬೆಂಕಿ ಹತ್ತಿದ್ದು ಸುತ್ತಮುತ್ತಲಿನ ಹುಲ್ಲುಗಾವಲಿಗೆ ಬೆಂಕಿ ಹತ್ತಿಕೊಂಡಿದೆ. ಮತ್ತೆ ವಿದ್ಯುತ್ ನಿಲುಗಡೆ ಆಗಿದ್ದು ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿ ನಂತರ ಬೆಂಕಿ ನಂದಿಸಿದ್ದಾರೆ.

ಪಿಕ್ ವಾಹನದ ಚಾಲಕ ಅಪಾಯ ಅರಿತು ಓಡಿದ್ದಾನೆ. ಅದೃಷ್ಟವಶಾತ್ ಪಿಕ್ ವಾಹನ ಮತ್ತು ಸಿಲಿಂಡರ್ ಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ವೇಳೆ ಗ್ಯಾಸ್ ಡೆಲಿವರಿ ಹುಡುಗ ಹತ್ತಿರದ ಮನೆಗೆ ಗ್ಯಾಸ್ ಹೊತ್ತು ಹೋಗಿದ್ದನೆನ್ನಲಾಗಿದೆ. ಬೆಂಕಿ ಹತ್ತಿಕೊಂಡ ಪ್ರದೇಶ ನಿರ್ಜನ ಪ್ರದೇಶವಾದುದರಿಂದ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.
HP Gas Cylinder pickup van rams into an electric pole in Pajir, Konaje in Mangalore. A great escape from a major catastrophe was avoided due to MESCOM workers.
28-10-25 03:40 pm
Bangalore Correspondent
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm