ಬ್ರೇಕಿಂಗ್ ನ್ಯೂಸ್
20-01-21 09:49 pm Mangaluru Correspondent ಕರಾವಳಿ
ಕೊಣಾಜೆ, ಜ.20: ವಿದ್ಯುತ್ ಕಂಬಕ್ಕೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಪಿಕ್ ಅಪ್ ವಾಹನ ಡಿಕ್ಕಿಯಾದ ಪರಿಣಾಮ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದ್ದು , ಕೂದಲೆಲೆಯ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ಸಂಜೆ 4 ಗಂಟೆ ವೇಳೆಗೆ ಪಜೀರು ಗ್ರಾಮ ಪಂಚಾಯತ್ ಕಚೇರಿಯ ಹಿಂಬದಿ ರಸ್ತೆಯಲ್ಲಿ HP ಗ್ಯಾಸ್ ಸಿಲಿಂಡರ್ ಗಳನ್ನು ಗ್ರಾಹಕರಿಗೆ ವಿತರಿಸುತ್ತಿದ್ದ ಪಿಕ್ ಅಪ್ ವಾಹನವು ರಿವರ್ಸ್ ತೆಗೆಯುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಕಂಬವು ತುಂಡಾಗಿ ಪಿಕ್ ಅಪ್ ವಾಹನದ ಮೇಲೆ ಉರುಳಿ ಬಿದ್ದಿದ್ದು ವಿದ್ಯುತ್ ಲೈನ್ ಸಿಲಿಂಡರ್ ಮೇಲೆ ಬಿದ್ದಿತ್ತು. ಅಷ್ಟರಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಬೆಂಕಿ ಹತ್ತಿಕೊಳ್ಳುವುದರಿಂದ ತಪ್ಪಿದೆ. ಅವಘಡವನ್ನು ತಿಳಿಯದ ಮೆಸ್ಕಾಂ ಸಿಬ್ಬಂದಿ ಮತ್ತೆ ಪವರ್ ಆನ್ ಮಾಡಿದ್ದರ ಪರಿಣಾಮ ಬೆಂಕಿ ಹತ್ತಿದ್ದು ಸುತ್ತಮುತ್ತಲಿನ ಹುಲ್ಲುಗಾವಲಿಗೆ ಬೆಂಕಿ ಹತ್ತಿಕೊಂಡಿದೆ. ಮತ್ತೆ ವಿದ್ಯುತ್ ನಿಲುಗಡೆ ಆಗಿದ್ದು ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿ ನಂತರ ಬೆಂಕಿ ನಂದಿಸಿದ್ದಾರೆ.

ಪಿಕ್ ವಾಹನದ ಚಾಲಕ ಅಪಾಯ ಅರಿತು ಓಡಿದ್ದಾನೆ. ಅದೃಷ್ಟವಶಾತ್ ಪಿಕ್ ವಾಹನ ಮತ್ತು ಸಿಲಿಂಡರ್ ಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ವೇಳೆ ಗ್ಯಾಸ್ ಡೆಲಿವರಿ ಹುಡುಗ ಹತ್ತಿರದ ಮನೆಗೆ ಗ್ಯಾಸ್ ಹೊತ್ತು ಹೋಗಿದ್ದನೆನ್ನಲಾಗಿದೆ. ಬೆಂಕಿ ಹತ್ತಿಕೊಂಡ ಪ್ರದೇಶ ನಿರ್ಜನ ಪ್ರದೇಶವಾದುದರಿಂದ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.
HP Gas Cylinder pickup van rams into an electric pole in Pajir, Konaje in Mangalore. A great escape from a major catastrophe was avoided due to MESCOM workers.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm