ಬ್ರೇಕಿಂಗ್ ನ್ಯೂಸ್
21-01-21 07:58 pm Mangaluru Correspondent ಕರಾವಳಿ
ಪುಣೆ, ಜನವರಿ 21: ಕೊರೊನಾ ಸೋಂಕಿನ ವಿರುದ್ಧ ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿಕೊಂಡಿದ್ದ ಪುಣೆಯ ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಇಂದು ಮಧ್ಯಾಹ್ನದ ವೇಳೆ ಬೆಂಕಿ ಅವಘಡ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ.
ಪುಣೆಯ ಮಂಜಿರಿ ಪ್ರದೇಶದಲ್ಲಿರುವ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಟರ್ಮಿನಲ್ ಗೇಟ್-1 ಒಳಗಿನ SEZ-3 ಕಟ್ಟಡದ ನಾಲ್ಕನೇ ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ನಂದಿಸಲು ಹತ್ತು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಎನ್ ಡಿಆರ್ ಎಫ್ ತಂಡವೂ ಕಾರ್ಯಾಚರಣೆಗೆ ಧಾವಿಸಿದೆ. ಆಕ್ಸ್ ಫರ್ಡ್ ಆಸ್ಟ್ರಾಜೆನೆಕಾದ ಕೋವಿಶೀಲ್ಡ್ ಲಸಿಕೆಯನ್ನು ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಉತ್ಪಾದನೆ ಮಾಡಲಾಗುತ್ತಿದೆ. ಸುಮಾರು ನೂರು ಎಕರೆ ಆವರಣದಲ್ಲಿ ಸಂಸ್ಥೆ ನಿರ್ಮಾಣವಾಗುತ್ತಿದ್ದು, ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡಿರುವ ಈ ಕಟ್ಟಡದಲ್ಲಿ ಸದ್ಯಕ್ಕೆ ಕೊರೊನಾ ಲಸಿಕೆ ಉತ್ಪಾದನೆ ನಡೆಯುತ್ತಿರಲಿಲ್ಲ ಎಂದು ತಿಳಿದುಬಂದಿದೆ.
ಲಸಿಕೆ ಉತ್ಪಾದನೆ ಮಾಡುತ್ತಿರುವ ಘಟಕಕ್ಕೆ ಈ ಕಟ್ಟಡ ಹೊಂದಿಕೊಂಡಿದೆ. ಸುಮಾರು ನಾಲ್ಕು ಮಂದಿ ಕಟ್ಟಡದ ಒಳಗೆ ಸಿಲುಕಿಕೊಂಡಿದ್ದು, ಮೂರು ಮಂದಿಯನ್ನು ರಕ್ಷಿಸಿರುವುದಾಗಿ ಅಗ್ನಿ ಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ದಟ್ಟ ಹೊಗೆ ಆವರಿಸಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಬೆಂಕಿ ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡ ಕೊರೊನಾ ಲಸಿಕೆ ಉತ್ಪಾದನೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಲಸಿಕೆಗಳು ಹಾಗೂ ಲಸಿಕಾ ಉತ್ಪಾದನಾ ಘಟಕಕ್ಕೆ ಯಾವುದೇ ತೊಂದರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಅವಘಡದ ಕುರಿತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪುಣೆ ನಗರ ಆಯುಕ್ತರಿಂದ ಸಂಪೂರ್ಣ ವಿವರ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.
A major fire broke out at a chemical solvent manufacturing unit in Maharashtra’s Pune district in the wee hours of Thursday killing five a fire brigade official said.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm