ಬ್ರೇಕಿಂಗ್ ನ್ಯೂಸ್
21-01-21 07:58 pm Mangaluru Correspondent ಕರಾವಳಿ
ಪುಣೆ, ಜನವರಿ 21: ಕೊರೊನಾ ಸೋಂಕಿನ ವಿರುದ್ಧ ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿಕೊಂಡಿದ್ದ ಪುಣೆಯ ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಇಂದು ಮಧ್ಯಾಹ್ನದ ವೇಳೆ ಬೆಂಕಿ ಅವಘಡ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ.
ಪುಣೆಯ ಮಂಜಿರಿ ಪ್ರದೇಶದಲ್ಲಿರುವ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಟರ್ಮಿನಲ್ ಗೇಟ್-1 ಒಳಗಿನ SEZ-3 ಕಟ್ಟಡದ ನಾಲ್ಕನೇ ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ನಂದಿಸಲು ಹತ್ತು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಎನ್ ಡಿಆರ್ ಎಫ್ ತಂಡವೂ ಕಾರ್ಯಾಚರಣೆಗೆ ಧಾವಿಸಿದೆ. ಆಕ್ಸ್ ಫರ್ಡ್ ಆಸ್ಟ್ರಾಜೆನೆಕಾದ ಕೋವಿಶೀಲ್ಡ್ ಲಸಿಕೆಯನ್ನು ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಉತ್ಪಾದನೆ ಮಾಡಲಾಗುತ್ತಿದೆ. ಸುಮಾರು ನೂರು ಎಕರೆ ಆವರಣದಲ್ಲಿ ಸಂಸ್ಥೆ ನಿರ್ಮಾಣವಾಗುತ್ತಿದ್ದು, ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡಿರುವ ಈ ಕಟ್ಟಡದಲ್ಲಿ ಸದ್ಯಕ್ಕೆ ಕೊರೊನಾ ಲಸಿಕೆ ಉತ್ಪಾದನೆ ನಡೆಯುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಲಸಿಕೆ ಉತ್ಪಾದನೆ ಮಾಡುತ್ತಿರುವ ಘಟಕಕ್ಕೆ ಈ ಕಟ್ಟಡ ಹೊಂದಿಕೊಂಡಿದೆ. ಸುಮಾರು ನಾಲ್ಕು ಮಂದಿ ಕಟ್ಟಡದ ಒಳಗೆ ಸಿಲುಕಿಕೊಂಡಿದ್ದು, ಮೂರು ಮಂದಿಯನ್ನು ರಕ್ಷಿಸಿರುವುದಾಗಿ ಅಗ್ನಿ ಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ದಟ್ಟ ಹೊಗೆ ಆವರಿಸಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಬೆಂಕಿ ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡ ಕೊರೊನಾ ಲಸಿಕೆ ಉತ್ಪಾದನೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಲಸಿಕೆಗಳು ಹಾಗೂ ಲಸಿಕಾ ಉತ್ಪಾದನಾ ಘಟಕಕ್ಕೆ ಯಾವುದೇ ತೊಂದರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಅವಘಡದ ಕುರಿತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪುಣೆ ನಗರ ಆಯುಕ್ತರಿಂದ ಸಂಪೂರ್ಣ ವಿವರ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.
A major fire broke out at a chemical solvent manufacturing unit in Maharashtra’s Pune district in the wee hours of Thursday killing five a fire brigade official said.
07-04-26 12:37 pm
HK News Staffer
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm