ಬ್ರೇಕಿಂಗ್ ನ್ಯೂಸ್
21-01-21 07:58 pm Mangaluru Correspondent ಕರಾವಳಿ
ಪುಣೆ, ಜನವರಿ 21: ಕೊರೊನಾ ಸೋಂಕಿನ ವಿರುದ್ಧ ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿಕೊಂಡಿದ್ದ ಪುಣೆಯ ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಇಂದು ಮಧ್ಯಾಹ್ನದ ವೇಳೆ ಬೆಂಕಿ ಅವಘಡ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ.
ಪುಣೆಯ ಮಂಜಿರಿ ಪ್ರದೇಶದಲ್ಲಿರುವ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಟರ್ಮಿನಲ್ ಗೇಟ್-1 ಒಳಗಿನ SEZ-3 ಕಟ್ಟಡದ ನಾಲ್ಕನೇ ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ನಂದಿಸಲು ಹತ್ತು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಎನ್ ಡಿಆರ್ ಎಫ್ ತಂಡವೂ ಕಾರ್ಯಾಚರಣೆಗೆ ಧಾವಿಸಿದೆ. ಆಕ್ಸ್ ಫರ್ಡ್ ಆಸ್ಟ್ರಾಜೆನೆಕಾದ ಕೋವಿಶೀಲ್ಡ್ ಲಸಿಕೆಯನ್ನು ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಉತ್ಪಾದನೆ ಮಾಡಲಾಗುತ್ತಿದೆ. ಸುಮಾರು ನೂರು ಎಕರೆ ಆವರಣದಲ್ಲಿ ಸಂಸ್ಥೆ ನಿರ್ಮಾಣವಾಗುತ್ತಿದ್ದು, ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡಿರುವ ಈ ಕಟ್ಟಡದಲ್ಲಿ ಸದ್ಯಕ್ಕೆ ಕೊರೊನಾ ಲಸಿಕೆ ಉತ್ಪಾದನೆ ನಡೆಯುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಲಸಿಕೆ ಉತ್ಪಾದನೆ ಮಾಡುತ್ತಿರುವ ಘಟಕಕ್ಕೆ ಈ ಕಟ್ಟಡ ಹೊಂದಿಕೊಂಡಿದೆ. ಸುಮಾರು ನಾಲ್ಕು ಮಂದಿ ಕಟ್ಟಡದ ಒಳಗೆ ಸಿಲುಕಿಕೊಂಡಿದ್ದು, ಮೂರು ಮಂದಿಯನ್ನು ರಕ್ಷಿಸಿರುವುದಾಗಿ ಅಗ್ನಿ ಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ದಟ್ಟ ಹೊಗೆ ಆವರಿಸಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಬೆಂಕಿ ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡ ಕೊರೊನಾ ಲಸಿಕೆ ಉತ್ಪಾದನೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಲಸಿಕೆಗಳು ಹಾಗೂ ಲಸಿಕಾ ಉತ್ಪಾದನಾ ಘಟಕಕ್ಕೆ ಯಾವುದೇ ತೊಂದರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಅವಘಡದ ಕುರಿತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪುಣೆ ನಗರ ಆಯುಕ್ತರಿಂದ ಸಂಪೂರ್ಣ ವಿವರ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.
A major fire broke out at a chemical solvent manufacturing unit in Maharashtra’s Pune district in the wee hours of Thursday killing five a fire brigade official said.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm