ಬ್ರೇಕಿಂಗ್ ನ್ಯೂಸ್
22-01-21 10:39 am Mangalore Correspondent ಕರಾವಳಿ
ಮಂಗಳೂರು, ಜ.22 : ಹಿರಿಯ ವಿದ್ಯಾರ್ಥಿಗಳ ರ್ಯಾಗಿಂಗ್ ಹಾವಳಿಯಿಂದಾಗಿ ಬಿ ಫಾರ್ಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜನ್ನೇ ತೊರೆದು ಪೊಲೀಸ್ ದೂರು ದಾಖಲಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರಿನ ವಳಚಿಲ್ನಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ಮೊದಲ ವರ್ಷದ ಬಿ ಫಾರ್ಮಸಿ ಕಲಿಯುತ್ತಿರುವ ವಿದ್ಯಾರ್ಥಿ ರ್ಯಾಗಿಂಗ್ ಹಿನ್ನೆಲೆಯಲ್ಲಿ ಕಾಲೇಜು ತೊರೆಯಲು ನಿರ್ಧರಿಸಿದ್ದಾನೆ. ಈತ ಜ.10 ರಂದು ತರಗತಿ ಮುಗಿಸಿ ಹಾಸ್ಟೆಲ್ ಕಡೆಗೆ ಹೋಗುತ್ತಿದ್ದ ವೇಳೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಅಡ್ಡಗಟ್ಟಿದ್ದು ಕಾಲೇಜಿಗೆ ಬರುವಾಗ ತಲೆಕೂದಲು ಹಾಗೂ ಮೀಸೆ ತೆಗೆದು ಬರಬೇಕೆಂದು ಬೆದರಿಸಿದ್ದಾರೆ. ಅದೇ ವೇಳೆ ಒಬ್ಬ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ. ಜ.12 ರಂದು ಅದೇ ವಿದ್ಯಾರ್ಥಿಗಳು ಮತ್ತೆ ಅಡ್ಡಗಟ್ಟಿ ಮೀಸೆ ಹಾಗೂ ತಲೆಕೂದಲು ತೆಗೆಯದೇ ಬಂದ ಕಾರಣಕ್ಕೆ ಬೈದಿದ್ದಾರೆ. ನಾಳೆ ಕಾಲೇಜಿಗೆ ಬರುವಾಗ ಮೀಸೆ ಹಾಗೂ ತಲೆ ಕೂದಲು ತೆಗೆಯದೇ ಬಂದಲ್ಲಿ ಕೂದಲನ್ನು ಕತ್ತರಿಸುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆಯೂ ಓರ್ವ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ.

ಭಯಗೊಂಡ ವಿದ್ಯಾರ್ಥಿ ಹಾಸ್ಟೆಲ್ಗೆ ಬಂದು ಮನೆಯವರಿಗೆ ಮಾಹಿತಿ ನೀಡಿದ್ದು, ಮನೆಯವರು ಅದೇ ದಿನ ಬಂದು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಘಟನೆ ಬಗ್ಗೆ ಸಂಬಂಧಿಕರಲ್ಲಿ ಚರ್ಚಿಸಿದ ಬಳಿಕ ರ್ಯಾಗಿಂಗ್ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಲು ಅಸಾಧ್ಯವಾಗಿರುವುದರಿಂದ ಕಾಲೇಜಿಗೆ ನೀಡಿರುವ SSLC, PUC ಸರ್ಟಿಫಿಕೇಟ್, ಟಿಸಿ ಮತ್ತು1,63,000 ಹಣವನ್ನು ಹಿಂದಿರುಗಿಸಲು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
A ragging case has been reported at Srinivas college at Valachil in Mangalore. The student has discontinued his studies.
07-04-26 12:37 pm
HK News Staffer
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm