ಬ್ರೇಕಿಂಗ್ ನ್ಯೂಸ್
22-01-21 10:39 am Mangalore Correspondent ಕರಾವಳಿ
ಮಂಗಳೂರು, ಜ.22 : ಹಿರಿಯ ವಿದ್ಯಾರ್ಥಿಗಳ ರ್ಯಾಗಿಂಗ್ ಹಾವಳಿಯಿಂದಾಗಿ ಬಿ ಫಾರ್ಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜನ್ನೇ ತೊರೆದು ಪೊಲೀಸ್ ದೂರು ದಾಖಲಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರಿನ ವಳಚಿಲ್ನಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ಮೊದಲ ವರ್ಷದ ಬಿ ಫಾರ್ಮಸಿ ಕಲಿಯುತ್ತಿರುವ ವಿದ್ಯಾರ್ಥಿ ರ್ಯಾಗಿಂಗ್ ಹಿನ್ನೆಲೆಯಲ್ಲಿ ಕಾಲೇಜು ತೊರೆಯಲು ನಿರ್ಧರಿಸಿದ್ದಾನೆ. ಈತ ಜ.10 ರಂದು ತರಗತಿ ಮುಗಿಸಿ ಹಾಸ್ಟೆಲ್ ಕಡೆಗೆ ಹೋಗುತ್ತಿದ್ದ ವೇಳೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಅಡ್ಡಗಟ್ಟಿದ್ದು ಕಾಲೇಜಿಗೆ ಬರುವಾಗ ತಲೆಕೂದಲು ಹಾಗೂ ಮೀಸೆ ತೆಗೆದು ಬರಬೇಕೆಂದು ಬೆದರಿಸಿದ್ದಾರೆ. ಅದೇ ವೇಳೆ ಒಬ್ಬ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ. ಜ.12 ರಂದು ಅದೇ ವಿದ್ಯಾರ್ಥಿಗಳು ಮತ್ತೆ ಅಡ್ಡಗಟ್ಟಿ ಮೀಸೆ ಹಾಗೂ ತಲೆಕೂದಲು ತೆಗೆಯದೇ ಬಂದ ಕಾರಣಕ್ಕೆ ಬೈದಿದ್ದಾರೆ. ನಾಳೆ ಕಾಲೇಜಿಗೆ ಬರುವಾಗ ಮೀಸೆ ಹಾಗೂ ತಲೆ ಕೂದಲು ತೆಗೆಯದೇ ಬಂದಲ್ಲಿ ಕೂದಲನ್ನು ಕತ್ತರಿಸುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆಯೂ ಓರ್ವ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ.

ಭಯಗೊಂಡ ವಿದ್ಯಾರ್ಥಿ ಹಾಸ್ಟೆಲ್ಗೆ ಬಂದು ಮನೆಯವರಿಗೆ ಮಾಹಿತಿ ನೀಡಿದ್ದು, ಮನೆಯವರು ಅದೇ ದಿನ ಬಂದು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಘಟನೆ ಬಗ್ಗೆ ಸಂಬಂಧಿಕರಲ್ಲಿ ಚರ್ಚಿಸಿದ ಬಳಿಕ ರ್ಯಾಗಿಂಗ್ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಲು ಅಸಾಧ್ಯವಾಗಿರುವುದರಿಂದ ಕಾಲೇಜಿಗೆ ನೀಡಿರುವ SSLC, PUC ಸರ್ಟಿಫಿಕೇಟ್, ಟಿಸಿ ಮತ್ತು1,63,000 ಹಣವನ್ನು ಹಿಂದಿರುಗಿಸಲು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
A ragging case has been reported at Srinivas college at Valachil in Mangalore. The student has discontinued his studies.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm