ಬ್ರೇಕಿಂಗ್ ನ್ಯೂಸ್
22-01-21 02:03 pm Mangalore Correspondent ಕರಾವಳಿ
ಮಂಗಳೂರು, ಜ.22 : ಉಳ್ಳಾಲ ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಪ್ರಕರಣದಲ್ಲಿ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಮಂಗಳೂರು ವಿಧಾನಸಭಾ ಇಂಟಕ್ ವತಿಯಿಂದ ಉಳ್ಳಾಲ ಪೊಲೀಸ್ ಠಾಣೆಗೆ ಮನವಿ ನೀಡಲಾಯಿತು.
ಮಂಗಳೂರು ವಿಧಾನಸಭಾ ಕ್ಷೇತ್ರದ ಇಂಟಕ್ ಅಧ್ಯಕ್ಷ ಹರೀಶ್ ರಾವ್ ಮಾತನಾಡಿ ಮಂಗಳೂರು ಕ್ಷೇತ್ರ ಕೋಮು ಸೂಕ್ಷ್ಮ ಪ್ರದೇಶವಾಗಿದ್ದು, ಇಲ್ಲಿಯ ಶಾಂತಿಗೆ ಧಕ್ಕೆ ತರುವಂತಹ ಷಡ್ಯಂತ್ರವನ್ನು ಹೂಡಿ ಕೊರಗಜ್ಜನ ಕಟ್ಟೆಯ ಹುಂಡಿಯಲ್ಲಿ ವಿಕೃತ ಮನಸ್ಸಿನವರು ಬೇಡದ ವಸ್ತುಗಳನ್ನು ಹಾಕಿ ಅಪವಿತ್ರಗೊಳಿಸುವ ಯತ್ನ ಮಾಡಿದ್ದಾರೆ. ಇದು ಈ ಭಾಗದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡುವ ಕಿಡಿಗೇಡಿ ಪ್ರಯತ್ನವಾಗಿದೆ. ಇದರಿಂದ ಸಹಸ್ರಾರು ಕೊರಗಜ್ಜ ಭಕ್ತರ ಮನಸ್ಸಿಗೆ ನೋವು ಉಂಟು ಮಾಡಿದೆ. ಅಲ್ಲದೆ, ಹಿಂದು ಧರ್ಮೀಯರಿಗೆ ಮಾಡಿದ ಅವಮಾನ ಎಂದು ಹೇಳಿದರು.

ಕೊಣಾಜೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಗರ್ಭಗುಡಿ ಬಳಿ ಇದ್ದ ಧ್ವಜ ತೆಗೆದು ಅದಕ್ಕೆ ಮೂತ್ರ ಮಾಡಿ ವಿಕೃತ ಮನಸ್ಸನ್ನು ತೋರಿಸಿರುತ್ತಾರೆ. ಇದರ ಹಿಂದೆ ವಿಕೃತ ಮನಸ್ಸಿನ ಹುಡುಗರ ಷಡ್ಯಂತ್ರ ಇರುವುದು ಖಾತರಿಯಾಗುತ್ತದೆ. ಜಿಲ್ಲೆಯಲ್ಲಿ ಗಲಭೆ ಎಬ್ಬಿಸಲು ಹುನ್ನಾರ ಸ್ಪಷ್ಟವಾಗಿ ಕಾಣುತ್ತಿದೆ. ದುಷ್ಕರ್ಮಿಗಳನ್ನ ಕೂಡಲೇ ಬಂಧಿಸಬೇಕು, ಇಲ್ಲವಾದಲ್ಲಿ ಉಳ್ಳಾಲ ಠಾಣೆಯ ಮುಂದೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದರು.

ಕೊರಗಜ್ಜ ಭಕ್ತ ರೋಹಿತ್ ಉಳ್ಳಾಲ್, ಮಂಗಳೂರು ವಿಧಾನಸಭಾ ಕ್ಷೇತ್ರದ ಯೂತ್ ಇಂಟಕ್ ಅಧ್ಯಕ್ಷ ಸಿದ್ದೀಕ್ ಹಸನ್, ಉಳ್ಳಾಲ ಕೊರಗಜ್ಜ ಗುಳಿಗಜ್ಜ ಸಮಿತಿಯ ಅಧ್ಯಕ್ಷ ಸುನೀಲ್, ಯುವ ಇಂಟಕ್ ನಾಯಕರಾದ ದೀಕ್ಷಿತ್ ವಿ.ಶೆಟ್ಟಿ, ಸಿರಾಜುದ್ದೀನ್, ಮುನೀರ್ ಬಾವ, ಬಾಸ್ಕರ್ ಮಡ್ಯಾರ್, ಅಬ್ದುಲ್ ಅಝೀಝ್ ಹಕ್, ಅಮಿತ್ ರಾಜ್ ಬೇಕಲ್, ವಿಶಾಲ್ ಕೊಲ್ಯ, ಮನೋಜ್ ಶೆಟ್ಟಿ, ಸೃಜನ್ ಶೆಟ್ಟಿ, ನಝೀರ್ ಬೆಳ್ಳಾರೆ, ರಾಜೇಂದ್ರ ಭಂಡಸಾಲೆ, ಪ್ರಶಾಂತ್ ಬಜಾಲ್, ವಿಶ್ವತ್ ಕೊಲ್ಯ, ವಿಶ್ವನಾಥ್ ಪೂಜಾರಿ, ನಿಯಾಝ್, ಕಿಶೋರ್ ತೊಕ್ಕೊಟ್ಟು, ಕೆ.ಎಂ.ಅಬ್ದುರ್ರಹ್ಮಾನ್ ಕೋಡಿಜಾಲ್, ಮುನ್ನೂರು ಗ್ರಾಮ ಇಂಟಕ್ ಅಧ್ಯಕ್ಷ ನಿಸಾರ್ ಮೊದಲಾದವರಿದ್ದರು.
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
ಉಳ್ಳಾಲಕ್ಕೆ ಕಮಿಷನರ್ ತಂಡ ಭೇಟಿ ; ಧಾರ್ಮಿಕ ಭಾವನೆಗೆ ಧಕ್ಕೆ ತರೋರನ್ನ ಸುಮ್ನೆ ಬಿಡಲ್ಲ ; ಸ್ಥಳದಲ್ಲೇ ವಾರ್ನ್ !
Miscreants Dirty act in temples of Ullal and Konaje Intec demands from quick arrest by submitting memorandum to Police Station
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm