ಬ್ರೇಕಿಂಗ್ ನ್ಯೂಸ್
23-01-21 11:55 am Mangalore Correspondent ಕರಾವಳಿ
ಸುಬ್ರಮಣ್ಯ, ಜ.23 : ಮುಜರಾಯಿ ದೇಗುಲಗಳಲ್ಲಿ ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ತಿಂಗಳಿಗೆ ಎರಡು ಬಾರಿ ಸಪ್ತಪದಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ 11ನೇ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಮಾಹಿತಿ ನೀಡಿದರು. ಫೆಬ್ರವರಿ ತಿಂಗಳ 17 ಮತ್ತು 25ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ ಆಯೋಜಿಸಲಾಗುವುದು. ಆ ಬಳಿಕ ಆಯಾ ತಿಂಗಳ ಮುಹೂರ್ತ ನೋಡಿಕೊಂಡು ಆಯಾ ಜಿಲ್ಲೆಗಳ ಜನರ ಸಂಪ್ರದಾಯ, ಪರಂಪರೆಗೆ ಅನುಗುಣವಾಗಿ ಸಪ್ತಪದಿ ಕಾರ್ಯಕ್ರಮ ನಡೆಸಲಾಗುವುದು. ಯಾವುದೇ ದೇವಸ್ಥಾನದವರು ಅಥವಾ ಜಿಲ್ಲೆಯವರು ಮುಂದೆ ಬಂದರೆ ಅವರು ಹೇಳಿದ ದಿನಾಂಕದಂದೇ ಸಪ್ತಪದಿ ಕಾರ್ಯಕ್ರಮ ನಡೆಸಲು ಅವಕಾಶ ಮಾಡಲಾಗುವುದು ಎಂದರು.

ವ್ಯವಸ್ಥಾಪನಾ ಸಮಿತಿ ನೇಮಕಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಸುಮಾರು 206 ಎ ದರ್ಜೆ ದೇವಾಲಯಗಳು ಮತ್ತು ಸುಮಾರು 310 ಬಿ ದರ್ಜೆ ದೇವಾಲಯಗಳಿವೆ. ರಾಜ್ಯ ಧಾರ್ಮಿಕ ಪರಿಷತ್ ಮೂಲಕ ಈಗಾಗಲೇ 80 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಅರ್ಜಿ ಕರೆಯಲಾಗಿತ್ತು. ಅದರಲ್ಲಿ ಸುಮಾರು 11 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಯಾಗಿ, ಆಡಳಿತ ನಡೆಸುತ್ತಿದೆ.
ಪೊಲೀಸ್ ವರದಿ ಬಾಕಿಯಿರುವ ದೇವಾಲಯಗಳು ಮಾತ್ರ ವ್ಯವಸ್ಥಾಪನಾ ಸಮಿತಿ ರಚನೆಗೆ ಬಾಕಿಯಾಗಿದೆ. ಇಂದಿನ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈಗಾಗಲೇ ಅವಧಿ ಮುಗಿದಿರುವ ದೇವಾಲಯಗಳಿಗೆ ಶೀಘ್ರ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಕರೆಯಲು ನಿರ್ಧರಿಸಲಾಗಿದೆ ಎಂದರು.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm