ಬ್ರೇಕಿಂಗ್ ನ್ಯೂಸ್
23-01-21 11:55 am Mangalore Correspondent ಕರಾವಳಿ
ಸುಬ್ರಮಣ್ಯ, ಜ.23 : ಮುಜರಾಯಿ ದೇಗುಲಗಳಲ್ಲಿ ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ತಿಂಗಳಿಗೆ ಎರಡು ಬಾರಿ ಸಪ್ತಪದಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ 11ನೇ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಮಾಹಿತಿ ನೀಡಿದರು. ಫೆಬ್ರವರಿ ತಿಂಗಳ 17 ಮತ್ತು 25ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ ಆಯೋಜಿಸಲಾಗುವುದು. ಆ ಬಳಿಕ ಆಯಾ ತಿಂಗಳ ಮುಹೂರ್ತ ನೋಡಿಕೊಂಡು ಆಯಾ ಜಿಲ್ಲೆಗಳ ಜನರ ಸಂಪ್ರದಾಯ, ಪರಂಪರೆಗೆ ಅನುಗುಣವಾಗಿ ಸಪ್ತಪದಿ ಕಾರ್ಯಕ್ರಮ ನಡೆಸಲಾಗುವುದು. ಯಾವುದೇ ದೇವಸ್ಥಾನದವರು ಅಥವಾ ಜಿಲ್ಲೆಯವರು ಮುಂದೆ ಬಂದರೆ ಅವರು ಹೇಳಿದ ದಿನಾಂಕದಂದೇ ಸಪ್ತಪದಿ ಕಾರ್ಯಕ್ರಮ ನಡೆಸಲು ಅವಕಾಶ ಮಾಡಲಾಗುವುದು ಎಂದರು.

ವ್ಯವಸ್ಥಾಪನಾ ಸಮಿತಿ ನೇಮಕಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಸುಮಾರು 206 ಎ ದರ್ಜೆ ದೇವಾಲಯಗಳು ಮತ್ತು ಸುಮಾರು 310 ಬಿ ದರ್ಜೆ ದೇವಾಲಯಗಳಿವೆ. ರಾಜ್ಯ ಧಾರ್ಮಿಕ ಪರಿಷತ್ ಮೂಲಕ ಈಗಾಗಲೇ 80 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಅರ್ಜಿ ಕರೆಯಲಾಗಿತ್ತು. ಅದರಲ್ಲಿ ಸುಮಾರು 11 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಯಾಗಿ, ಆಡಳಿತ ನಡೆಸುತ್ತಿದೆ.
ಪೊಲೀಸ್ ವರದಿ ಬಾಕಿಯಿರುವ ದೇವಾಲಯಗಳು ಮಾತ್ರ ವ್ಯವಸ್ಥಾಪನಾ ಸಮಿತಿ ರಚನೆಗೆ ಬಾಕಿಯಾಗಿದೆ. ಇಂದಿನ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈಗಾಗಲೇ ಅವಧಿ ಮುಗಿದಿರುವ ದೇವಾಲಯಗಳಿಗೆ ಶೀಘ್ರ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಕರೆಯಲು ನಿರ್ಧರಿಸಲಾಗಿದೆ ಎಂದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm