ಬ್ರೇಕಿಂಗ್ ನ್ಯೂಸ್
23-01-21 11:55 am Mangalore Correspondent ಕರಾವಳಿ
ಸುಬ್ರಮಣ್ಯ, ಜ.23 : ಮುಜರಾಯಿ ದೇಗುಲಗಳಲ್ಲಿ ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ತಿಂಗಳಿಗೆ ಎರಡು ಬಾರಿ ಸಪ್ತಪದಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ 11ನೇ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಮಾಹಿತಿ ನೀಡಿದರು. ಫೆಬ್ರವರಿ ತಿಂಗಳ 17 ಮತ್ತು 25ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ ಆಯೋಜಿಸಲಾಗುವುದು. ಆ ಬಳಿಕ ಆಯಾ ತಿಂಗಳ ಮುಹೂರ್ತ ನೋಡಿಕೊಂಡು ಆಯಾ ಜಿಲ್ಲೆಗಳ ಜನರ ಸಂಪ್ರದಾಯ, ಪರಂಪರೆಗೆ ಅನುಗುಣವಾಗಿ ಸಪ್ತಪದಿ ಕಾರ್ಯಕ್ರಮ ನಡೆಸಲಾಗುವುದು. ಯಾವುದೇ ದೇವಸ್ಥಾನದವರು ಅಥವಾ ಜಿಲ್ಲೆಯವರು ಮುಂದೆ ಬಂದರೆ ಅವರು ಹೇಳಿದ ದಿನಾಂಕದಂದೇ ಸಪ್ತಪದಿ ಕಾರ್ಯಕ್ರಮ ನಡೆಸಲು ಅವಕಾಶ ಮಾಡಲಾಗುವುದು ಎಂದರು.
ವ್ಯವಸ್ಥಾಪನಾ ಸಮಿತಿ ನೇಮಕಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಸುಮಾರು 206 ಎ ದರ್ಜೆ ದೇವಾಲಯಗಳು ಮತ್ತು ಸುಮಾರು 310 ಬಿ ದರ್ಜೆ ದೇವಾಲಯಗಳಿವೆ. ರಾಜ್ಯ ಧಾರ್ಮಿಕ ಪರಿಷತ್ ಮೂಲಕ ಈಗಾಗಲೇ 80 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಅರ್ಜಿ ಕರೆಯಲಾಗಿತ್ತು. ಅದರಲ್ಲಿ ಸುಮಾರು 11 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಯಾಗಿ, ಆಡಳಿತ ನಡೆಸುತ್ತಿದೆ.
ಪೊಲೀಸ್ ವರದಿ ಬಾಕಿಯಿರುವ ದೇವಾಲಯಗಳು ಮಾತ್ರ ವ್ಯವಸ್ಥಾಪನಾ ಸಮಿತಿ ರಚನೆಗೆ ಬಾಕಿಯಾಗಿದೆ. ಇಂದಿನ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈಗಾಗಲೇ ಅವಧಿ ಮುಗಿದಿರುವ ದೇವಾಲಯಗಳಿಗೆ ಶೀಘ್ರ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಕರೆಯಲು ನಿರ್ಧರಿಸಲಾಗಿದೆ ಎಂದರು.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm