ಬ್ರೇಕಿಂಗ್ ನ್ಯೂಸ್
23-01-21 03:31 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು - ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ಸೇತುವೆ ಸಮೀಪ ವಾಹನ ಸವಾರರು ತ್ಯಾಜ್ಯ ಎಸೆಯುವ ಜಾಗದಲ್ಲಿ ಹಸಿರು ದಳ ಸಂಸ್ಥೆಯ ಸದಸ್ಯರು ಜಾಗೃತಿ ಮೂಡಿಸುವ ಕಾರ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಶ್ಲಾಘಿಸಿದ್ದಾರೆ.
ಸ್ಥಳಕ್ಕೆ ತೆರಳಿದ ಶಾಸಕ ಕಾಮತ್ ಅವರು, ನೇತ್ರಾವತಿ ಸೇತುವೆಯ ಬಳಿ ಖಾಲಿ ಜಾಗದಲ್ಲಿ ಪ್ರತಿನಿತ್ಯ ವಾಹನ ಸವಾರರು ಕಸ ಎಸೆದು ಹೋಗುವ ಕುರಿತು ಮಾಹಿತಿ ನೀಡಿದ್ದರು. ಹಲವಾರು ಬಾರಿ ಸ್ಥಳವನ್ನು ಸ್ವಚ್ಛಗೊಳಿಸಿದರು ತ್ಯಾಜ್ಯ ಎಸೆಯುವುದು ನಿಂತಿರಲಿಲ್ಲ. ಇತ್ತೀಚೆಗೆ ಕಳೆದ ಕೆಲ ಸಮಯದಿಂದ ಹಸಿರು ದಳ ಸಂಸ್ಥೆಯ ಸದಸ್ಯರು ಈ ಜಾಗದಲ್ಲಿ ಪ್ಲೆಕಾರ್ಡ್ ಹಿಡಿದು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ಶಾಸಕ ಕಾಮತ್ ಹೇಳಿದರು.

ಸ್ವಚ್ಚತಾ ಕಾರ್ಯಗಳು ಸೀಮಿತ ಸಂಸ್ಥೆಗಳು ಅಥವಾ ವ್ಯಕ್ತಿಯಿಂದ ಆಗುವಂತದ್ದಲ್ಲ. ಪ್ರತಿಯೊಬ್ಬ ನಾಗರಿಕರಿಗೂ ತನ್ನದೇ ಆದ ಜವಬ್ದಾರಿಗಳಿರುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ತ್ಯಾಜ್ಯಗಳನ್ನು ಎಸೆಯುವುದರಿಂದ ವಿವಿಧ ಸಮಸ್ಯೆಗಳು ತಲೆದೋರುತ್ತವೆ. ಹಾಗಾಗಿ ಪ್ರತಿಯೊಬ್ಬರೂ ಕೂಡ ಸ್ವಚ್ಚತೆಯ ನಿಟ್ಟಿನಲ್ಲಿ ಚಿಂತಿಸಬೇಕು. ಆ ಮೂಲಕ ಸ್ವಚ್ಛ ಭಾರತದ ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕೆಂದು ಶಾಸಕ ಕಾಮತ್ ತಿಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಸದಸ್ಯರಾದ ವೀಣಾ ಮಂಗಳ, ಬಿಜೆಪಿ ಪ್ರಮುಖರಾದ ಸುರೇಂದ್ರ ಜೆಪ್ಪಿನಮೊಗರು, ಹಸಿರು ದಳ ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm