ಬ್ರೇಕಿಂಗ್ ನ್ಯೂಸ್
23-01-21 04:21 pm Mangalore Correspondent ಕರಾವಳಿ
ಮಂಗಳೂರು, ಜ.23 : ಸಿಎಂ ತವರು ಜಿಲ್ಲೆಯಲ್ಲೇ ಅಕ್ರಮ ಗಣಿಗಾರಿಕೆ ಕಂಡುಬಂದಿದ್ದಲ್ಲದೆ, ಭಾರೀ ಸ್ಫೋಟ ಆಗಿರುವುದು ಅಲ್ಲಿನ ಕಾನೂನು ವ್ಯವಸ್ಥೆ ಬಗ್ಗೆ ಶಂಕೆ ಮೂಡಿಸಿದೆ. ಪೊಲೀಸರು ಜನ ಸಾಮಾನ್ಯರ ಮರಳು ಗಾಡಿಯನ್ನು ವಶ ಪಡಿಸಿಕೊಳ್ಳತ್ತಾರೆ. ಯಾಕೆ ಲಾರಿಯಲ್ಲಿ ಸ್ಪೋಟಕ ವಸ್ತು ಸಾಗಟ ಮಾಡುವವರನ್ನ ಹಿಡಿಯಲ್ಲಾ.. ಇದು ಅಲ್ಲಿನ ಗಣಿ ಇಲಾಖೆ ಅಧಿಕಾರಿಗಳಿಗೆ ಗೊತ್ತಿರಲಿಲ್ಲವೇ ? ಸಂಬಂಧಪಟ್ಟ ಗಣಿ ಇಲಾಖೆ ಅಧಿಕಾರಿಗಳನ್ನ ಕೂಡಲೇ ಸಂಸ್ಪೆಂಡ್ ಮಾಡಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಖಾದರ್, ಸ್ಫೋಟ ಘಟನೆಯಿಂದ ಜನಸಾಮಾನ್ಯರ ಮನೆಗಳು ಹಾಳಾಗಿವೆ. ಅಕ್ರಮ ಎಂದು ಗೊತ್ತಿದ್ದರೂ ಯಾಕೆ ಸರಕಾರ ಇದರ ಬಗ್ಗೆ ತನಿಖೆ ಮಾಡಲು ಹಿಂದೇಟು ಹಾಕಿತ್ತು. ಇದರಲ್ಲಿ ಯಾರೆಲ್ಲಾ ಶಾಮೀಲಾತಿ ಇದ್ದಾರೆ ಜನರಿಗೆ ಗೊತ್ತಾಗಬೇಕು. ಈ ಘಟನೆಯಿಂದ ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯ ಜನರ ಜೀವನದ ಮೇಲೆ ಪರಿಣಾಮ ಬೀರಲಿದೆ. ಆಸುಪಾಸಿನಲ್ಲಿ ಮನೆ ಹಾಳಾದವರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಅರ್ನಾಬ್ ವಿರುದ್ಧ ಕ್ರಮಕ್ಕೆ ಆಗ್ರಹ
ದೇಶದ ರಕ್ಷಣೆ ಉದ್ದೇಶದಿಂದ ಭದ್ರತಾ ವಿಷಯ ಗೌಪ್ಯವಾಗಿರಬೇಕು. ಆದರೆ, ರಿಪಬ್ಲಿಕ್ ಟಿವಿ ಮುಖ್ಯಸ್ಥರು ಹೀನ ಕೃತ್ಯದಲ್ಲಿ ತೊಡಗಿದ್ದಾರೆ. ದೇಶದ ಭದ್ರತೆ ವಿಚಾರವನ್ನು ಅಧಿಕಾರಿಗಳು ಸೋರಿಕೆ ಮಾಡಿದ್ದಾರೆ. ಹೀನ ಕೃತ್ಯದ ಹೊಣೆಯನ್ನ ನೇರವಾಗಿ ಪ್ರಧಾನ ಮಂತ್ರಿ ಹೊರಬೇಕು. ಘಟನೆ ಬಗ್ಗೆ ಸದನ ಸಮಿತಿಯಿಂದ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ವಕ್ತಾರ, ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ್ ಹೇಳಿದ್ದಾರೆ.

ಅರ್ನಾಬ್ ಗೋಸ್ವಾಮಿಯ ವಾಟ್ಸಪ್ ಚಾಟ್ ನೋಡಿದರೆ ಸಂಪೂರ್ಣವಾಗಿ ಅರ್ಥವಾಗುತ್ತೆ. ಇದು ಒಂದು ದೇಶದೋಹ್ರದ ಕೃತ್ಯವೆಂದು ತಿಳಿದುಬರುತ್ತದೆ. ಇದರಿಂದ ಪುಲ್ವಾಮ ದಾಳಿಯ ಕೃತ್ಯ ಮೊದಲೇ ನಿರ್ಧಾರವಾಗಿತ್ತಾ ಎನ್ನುವ ಸಂಶಯ ಕಾಡುವಂತಾಗಿದೆ. ರಾಜಕೀಯ ದುರುದ್ದೇಶದಿಂದ ಈ ದಾಳಿ ನಡೆಸಿದ್ದಾರೆಯೇ ಎನ್ನುವ ಶಂಕೆ ಮೂಡುತ್ತಿದೆ. ಅರ್ನಾಬ್ ಗೋಸ್ವಾಮಿಯ ವಾಹಿನಿ TRP ಗಾಗಿ ಈ ಕೃತ್ಯ ನಡೆಸಿದೆ ಎನ್ನುವುದಕ್ಕೆ ಬೇರೆ ಸಾಕ್ಷಿ ಬೇಕಿಲ್ಲ. ದೇಶದ್ರೋಹಿ ಕೃತ್ಯದಲ್ಲಿ ತೊಡಗಿರುವ ಅರ್ನಾಬ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm