ಬ್ರೇಕಿಂಗ್ ನ್ಯೂಸ್
23-01-21 05:29 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು ಬಹಳ ಸಾಮರಸ್ಯದಿಂದ ಇರುವ ನಗರ. ಇತರ ರಾಜ್ಯಗಳಲ್ಲದೆ, ದೇಶ -ವಿದೇಶಗಳಿಂದಲೂ ಬಂದು ಜನರು ಇಲ್ಲಿ ವಾಸಿಸುತ್ತಿದ್ದಾರೆ. ಕಿಡಿಗೇಡಿಗಳ ಕೆಲವು ಕೃತ್ಯದಿಂದಾಗಿ ಮಂಗಳೂರಿನ ಹೆಸರು ಹಾಳಾಗಬಾರದು ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಹೇಳಿದರು.
ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಕಮಿಷನರ್, ಮಂಗಳೂರಿನಲ್ಲಿ ಇತ್ತೀಚೆಗೆ ಧಾರ್ಮಿಕ ಕೇಂದ್ರಗಳ ಹುಂಡಿಯಲ್ಲಿ ಅನುಚಿತ ವಸ್ತುಗಳು ಹಾಗೂ ಅಸಹ್ಯಕರ ರೀತಿಯಲ್ಲಿ ಬರೆದ ಕಾಗದಗಳನ್ನು ಹಾಕಿದ್ದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ನಾಲ್ಕೈದು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದರು.
ಈ ರೀತಿಯ ಕೃತ್ಯಗಳಲ್ಲಿ ತೊಡಗಿಸಿಕೊಂಡವರು ತಕ್ಷಣ ಇದನ್ನು ನಿಲ್ಲಿಸಬೇಕು. ಅಲ್ಲದೆ ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚುವ ಕೆಲಸ ಶೀಘ್ರ ಮಾಡಲಿದ್ದೇವೆ. ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳು ಇರಬಹುದು, ಅಲ್ಲಿನ ಆಡಳಿತ ಸಮಿತಿ ಇಂತಹ ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು. ಸೂಕ್ತವಾದ ಭದ್ರತಾ ವ್ಯವಸ್ಥೆ ನಿಯೋಜಿಸುವ ಕಾರ್ಯ ಮಾಡಬೇಕೆಂದು ಕಮಿಷನರ್ ಮನವಿ ಮಾಡಿದರು.
ಸಾರ್ವಜನಿಕರು ಇಂತಹ ಕೃತ್ಯಗಳ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆ ಅಥವಾ ನೇರವಾಗಿ ನನಗೂ ಮಾಹಿತಿ ನೀಡಬಹುದು. ಈ ಮೂಲಕ ಇಂತಹ ಕೃತ್ಯ ನಡೆಸುವ ಕಿಡಿಗೇಡಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಲು ಸಹಕಾರಿಯಾಗುತ್ತದೆ. ಸಾರ್ವಜನಿಕರು ಈ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಕಂಟ್ರೋಲ್ ದೂರವಾಣಿ ಸಂಖ್ಯೆ 9480802300ಗೆ ವಾಟ್ಸ್ ಆ್ಯಪ್ ಅಥವಾ ಮೆಸೇಜ್ ಮೂಲಕ ತಿಳಿಸಬಹುದು ಎಂದು ಪೊಲೀಸ್ ಕಮಿಷನರ್ ವಿನಂತಿಸಿಕೊಂಡರು.
(1/2)Appeal to people of Mangaluru Commisionerate to share information regarding any untoward developments in your neighborhood. pic.twitter.com/DvWTMB3PUz
— N. Shashi Kumar CP Mangaluru City (@compolmlr) January 23, 2021
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm