ಬ್ರೇಕಿಂಗ್ ನ್ಯೂಸ್
23-01-21 05:29 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು ಬಹಳ ಸಾಮರಸ್ಯದಿಂದ ಇರುವ ನಗರ. ಇತರ ರಾಜ್ಯಗಳಲ್ಲದೆ, ದೇಶ -ವಿದೇಶಗಳಿಂದಲೂ ಬಂದು ಜನರು ಇಲ್ಲಿ ವಾಸಿಸುತ್ತಿದ್ದಾರೆ. ಕಿಡಿಗೇಡಿಗಳ ಕೆಲವು ಕೃತ್ಯದಿಂದಾಗಿ ಮಂಗಳೂರಿನ ಹೆಸರು ಹಾಳಾಗಬಾರದು ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಹೇಳಿದರು.
ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಕಮಿಷನರ್, ಮಂಗಳೂರಿನಲ್ಲಿ ಇತ್ತೀಚೆಗೆ ಧಾರ್ಮಿಕ ಕೇಂದ್ರಗಳ ಹುಂಡಿಯಲ್ಲಿ ಅನುಚಿತ ವಸ್ತುಗಳು ಹಾಗೂ ಅಸಹ್ಯಕರ ರೀತಿಯಲ್ಲಿ ಬರೆದ ಕಾಗದಗಳನ್ನು ಹಾಕಿದ್ದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ನಾಲ್ಕೈದು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದರು.
ಈ ರೀತಿಯ ಕೃತ್ಯಗಳಲ್ಲಿ ತೊಡಗಿಸಿಕೊಂಡವರು ತಕ್ಷಣ ಇದನ್ನು ನಿಲ್ಲಿಸಬೇಕು. ಅಲ್ಲದೆ ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚುವ ಕೆಲಸ ಶೀಘ್ರ ಮಾಡಲಿದ್ದೇವೆ. ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳು ಇರಬಹುದು, ಅಲ್ಲಿನ ಆಡಳಿತ ಸಮಿತಿ ಇಂತಹ ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು. ಸೂಕ್ತವಾದ ಭದ್ರತಾ ವ್ಯವಸ್ಥೆ ನಿಯೋಜಿಸುವ ಕಾರ್ಯ ಮಾಡಬೇಕೆಂದು ಕಮಿಷನರ್ ಮನವಿ ಮಾಡಿದರು.
ಸಾರ್ವಜನಿಕರು ಇಂತಹ ಕೃತ್ಯಗಳ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆ ಅಥವಾ ನೇರವಾಗಿ ನನಗೂ ಮಾಹಿತಿ ನೀಡಬಹುದು. ಈ ಮೂಲಕ ಇಂತಹ ಕೃತ್ಯ ನಡೆಸುವ ಕಿಡಿಗೇಡಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಲು ಸಹಕಾರಿಯಾಗುತ್ತದೆ. ಸಾರ್ವಜನಿಕರು ಈ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಕಂಟ್ರೋಲ್ ದೂರವಾಣಿ ಸಂಖ್ಯೆ 9480802300ಗೆ ವಾಟ್ಸ್ ಆ್ಯಪ್ ಅಥವಾ ಮೆಸೇಜ್ ಮೂಲಕ ತಿಳಿಸಬಹುದು ಎಂದು ಪೊಲೀಸ್ ಕಮಿಷನರ್ ವಿನಂತಿಸಿಕೊಂಡರು.
(1/2)Appeal to people of Mangaluru Commisionerate to share information regarding any untoward developments in your neighborhood. pic.twitter.com/DvWTMB3PUz
— N. Shashi Kumar CP Mangaluru City (@compolmlr) January 23, 2021
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm