ಬ್ರೇಕಿಂಗ್ ನ್ಯೂಸ್
25-01-21 01:18 pm Mangalore Correspondent ಕರಾವಳಿ
ಮಂಗಳೂರು, ಜ.25: ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತರುತ್ತಿರುವ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ಮತ್ತು ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು.
ದೇಶಾದ್ಯಂತ ಚಳವಳಿ ನಿರತ ರೈತರನ್ನು ಬೆಂಬಲಿಸಿ ಕಾಂಗ್ರೆಸ್ ಹೋರಾಟ ಹಮ್ಮಿಕೊಂಡಿದ್ದು, ಕರ್ನಾಟಕದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರ ಮತ್ತು ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದರಂತೆ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗಿದೆ.


ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜೆ. ಆರ್. ಲೋಬೋ, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು ಈಗ ರೈತರನ್ನೇ ವಂಚಿಸುತ್ತಿವೆ. ಎರಡು ತಿಂಗಳಿನಿಂದ ರೈತರು ಬೀದಿಯಲ್ಲಿದ್ದಾರೆ, ಅರುವತ್ತರಷ್ಟು ರೈತರು ಚಳವಳಿ ಮಾಡುತ್ತಲೇ ಮರಣ ಹೊಂದಿದ್ದಾರೆ. ಆದರೆ ಮೋದಿ ಸರಕಾರವು ಮಾನವೀಯತೆ ಇಲ್ಲದ ರೀತಿ ರೈತರನ್ನು ನಡೆಸಿಕೊಳ್ಳುತ್ತಿದೆ. ಈ ದೇಶದ ಬುನಾದಿಯಾಗಿರುವ ರೈತರಿಗೆ ನ್ಯಾಯ ಕೊಡಿಸಲಾಗದ ಬಿಜೆಪಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಇಲ್ಲ. ಕಾಂಗ್ರೆಸ್ ಸರಕಾರ ಸಾಧಿಸಿದ ಕೃಷಿ ಕ್ರಾಂತಿ, ಭೂಸುಧಾರಣೆ ಎಲ್ಲವನ್ನೂ ಬಿಜೆಪಿ ನಾಶ ಪಡಿಸುತ್ತಿದೆ. ಇದು ಬಿಜೆಪಿಯ ಅವನತಿಗೆ ಕಾರಣವಾಗಲಿದೆ ಎಂದರು.

ಸ್ಥಳೀಯ ಕಾರ್ಪೊರೇಟರ್ ವಿನಯರಾಜ್ ಮಾತನಾಡಿದರು. ಪ್ರತಿಭಟನೆಯಲ್ಲಿ ನಮಿತಾ ರಾವ್, ಗೀತಾ, ಮರಿಯಮ್ಮ ಥಾಮಸ್, ಮಂಜುಳ ನಾಯಕ್, ಜೀನತ್ ಸಂಶುದ್ದೀನ್, ಶಶಿಧರ ಹೆಗ್ಡೆ, ಕೇಶವ ಮರೋಳಿ, ನೀರಜ್ ಪಾಲ್, ಭರತೇಶ್ ಅಮೀನ್, ಟಿ. ಕೆ. ಸುಧೀರ್, ವಿಶ್ವಾಸ್ ದಾಸ್, ಯೂಸುಫ್ ಉಚ್ಚಿಲ, ಗಣೇಶ ರಾವ್ ಮೊದಲಾದವರು ಸೇರಿದ್ದರು.
Video:
In a show of support to the farmers protesting against the farm laws in New Delhi and Karnataka Mangalore, Congress leaders held a mass protest.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm