ಬ್ರೇಕಿಂಗ್ ನ್ಯೂಸ್
25-01-21 01:18 pm Mangalore Correspondent ಕರಾವಳಿ
ಮಂಗಳೂರು, ಜ.25: ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತರುತ್ತಿರುವ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ಮತ್ತು ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು.
ದೇಶಾದ್ಯಂತ ಚಳವಳಿ ನಿರತ ರೈತರನ್ನು ಬೆಂಬಲಿಸಿ ಕಾಂಗ್ರೆಸ್ ಹೋರಾಟ ಹಮ್ಮಿಕೊಂಡಿದ್ದು, ಕರ್ನಾಟಕದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರ ಮತ್ತು ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದರಂತೆ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜೆ. ಆರ್. ಲೋಬೋ, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು ಈಗ ರೈತರನ್ನೇ ವಂಚಿಸುತ್ತಿವೆ. ಎರಡು ತಿಂಗಳಿನಿಂದ ರೈತರು ಬೀದಿಯಲ್ಲಿದ್ದಾರೆ, ಅರುವತ್ತರಷ್ಟು ರೈತರು ಚಳವಳಿ ಮಾಡುತ್ತಲೇ ಮರಣ ಹೊಂದಿದ್ದಾರೆ. ಆದರೆ ಮೋದಿ ಸರಕಾರವು ಮಾನವೀಯತೆ ಇಲ್ಲದ ರೀತಿ ರೈತರನ್ನು ನಡೆಸಿಕೊಳ್ಳುತ್ತಿದೆ. ಈ ದೇಶದ ಬುನಾದಿಯಾಗಿರುವ ರೈತರಿಗೆ ನ್ಯಾಯ ಕೊಡಿಸಲಾಗದ ಬಿಜೆಪಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಇಲ್ಲ. ಕಾಂಗ್ರೆಸ್ ಸರಕಾರ ಸಾಧಿಸಿದ ಕೃಷಿ ಕ್ರಾಂತಿ, ಭೂಸುಧಾರಣೆ ಎಲ್ಲವನ್ನೂ ಬಿಜೆಪಿ ನಾಶ ಪಡಿಸುತ್ತಿದೆ. ಇದು ಬಿಜೆಪಿಯ ಅವನತಿಗೆ ಕಾರಣವಾಗಲಿದೆ ಎಂದರು.
ಸ್ಥಳೀಯ ಕಾರ್ಪೊರೇಟರ್ ವಿನಯರಾಜ್ ಮಾತನಾಡಿದರು. ಪ್ರತಿಭಟನೆಯಲ್ಲಿ ನಮಿತಾ ರಾವ್, ಗೀತಾ, ಮರಿಯಮ್ಮ ಥಾಮಸ್, ಮಂಜುಳ ನಾಯಕ್, ಜೀನತ್ ಸಂಶುದ್ದೀನ್, ಶಶಿಧರ ಹೆಗ್ಡೆ, ಕೇಶವ ಮರೋಳಿ, ನೀರಜ್ ಪಾಲ್, ಭರತೇಶ್ ಅಮೀನ್, ಟಿ. ಕೆ. ಸುಧೀರ್, ವಿಶ್ವಾಸ್ ದಾಸ್, ಯೂಸುಫ್ ಉಚ್ಚಿಲ, ಗಣೇಶ ರಾವ್ ಮೊದಲಾದವರು ಸೇರಿದ್ದರು.
Video:
In a show of support to the farmers protesting against the farm laws in New Delhi and Karnataka Mangalore, Congress leaders held a mass protest.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
03-09-25 10:04 pm
HK News Desk
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm