ಬ್ರೇಕಿಂಗ್ ನ್ಯೂಸ್
25-01-21 01:18 pm Mangalore Correspondent ಕರಾವಳಿ
ಮಂಗಳೂರು, ಜ.25: ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತರುತ್ತಿರುವ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ಮತ್ತು ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು.
ದೇಶಾದ್ಯಂತ ಚಳವಳಿ ನಿರತ ರೈತರನ್ನು ಬೆಂಬಲಿಸಿ ಕಾಂಗ್ರೆಸ್ ಹೋರಾಟ ಹಮ್ಮಿಕೊಂಡಿದ್ದು, ಕರ್ನಾಟಕದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರ ಮತ್ತು ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದರಂತೆ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗಿದೆ.


ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜೆ. ಆರ್. ಲೋಬೋ, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು ಈಗ ರೈತರನ್ನೇ ವಂಚಿಸುತ್ತಿವೆ. ಎರಡು ತಿಂಗಳಿನಿಂದ ರೈತರು ಬೀದಿಯಲ್ಲಿದ್ದಾರೆ, ಅರುವತ್ತರಷ್ಟು ರೈತರು ಚಳವಳಿ ಮಾಡುತ್ತಲೇ ಮರಣ ಹೊಂದಿದ್ದಾರೆ. ಆದರೆ ಮೋದಿ ಸರಕಾರವು ಮಾನವೀಯತೆ ಇಲ್ಲದ ರೀತಿ ರೈತರನ್ನು ನಡೆಸಿಕೊಳ್ಳುತ್ತಿದೆ. ಈ ದೇಶದ ಬುನಾದಿಯಾಗಿರುವ ರೈತರಿಗೆ ನ್ಯಾಯ ಕೊಡಿಸಲಾಗದ ಬಿಜೆಪಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಇಲ್ಲ. ಕಾಂಗ್ರೆಸ್ ಸರಕಾರ ಸಾಧಿಸಿದ ಕೃಷಿ ಕ್ರಾಂತಿ, ಭೂಸುಧಾರಣೆ ಎಲ್ಲವನ್ನೂ ಬಿಜೆಪಿ ನಾಶ ಪಡಿಸುತ್ತಿದೆ. ಇದು ಬಿಜೆಪಿಯ ಅವನತಿಗೆ ಕಾರಣವಾಗಲಿದೆ ಎಂದರು.

ಸ್ಥಳೀಯ ಕಾರ್ಪೊರೇಟರ್ ವಿನಯರಾಜ್ ಮಾತನಾಡಿದರು. ಪ್ರತಿಭಟನೆಯಲ್ಲಿ ನಮಿತಾ ರಾವ್, ಗೀತಾ, ಮರಿಯಮ್ಮ ಥಾಮಸ್, ಮಂಜುಳ ನಾಯಕ್, ಜೀನತ್ ಸಂಶುದ್ದೀನ್, ಶಶಿಧರ ಹೆಗ್ಡೆ, ಕೇಶವ ಮರೋಳಿ, ನೀರಜ್ ಪಾಲ್, ಭರತೇಶ್ ಅಮೀನ್, ಟಿ. ಕೆ. ಸುಧೀರ್, ವಿಶ್ವಾಸ್ ದಾಸ್, ಯೂಸುಫ್ ಉಚ್ಚಿಲ, ಗಣೇಶ ರಾವ್ ಮೊದಲಾದವರು ಸೇರಿದ್ದರು.
Video:
In a show of support to the farmers protesting against the farm laws in New Delhi and Karnataka Mangalore, Congress leaders held a mass protest.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm