ಬ್ರೇಕಿಂಗ್ ನ್ಯೂಸ್
25-01-21 01:18 pm Mangalore Correspondent ಕರಾವಳಿ
ಮಂಗಳೂರು, ಜ.25: ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತರುತ್ತಿರುವ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ಮತ್ತು ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು.
ದೇಶಾದ್ಯಂತ ಚಳವಳಿ ನಿರತ ರೈತರನ್ನು ಬೆಂಬಲಿಸಿ ಕಾಂಗ್ರೆಸ್ ಹೋರಾಟ ಹಮ್ಮಿಕೊಂಡಿದ್ದು, ಕರ್ನಾಟಕದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರ ಮತ್ತು ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದರಂತೆ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗಿದೆ.


ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜೆ. ಆರ್. ಲೋಬೋ, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು ಈಗ ರೈತರನ್ನೇ ವಂಚಿಸುತ್ತಿವೆ. ಎರಡು ತಿಂಗಳಿನಿಂದ ರೈತರು ಬೀದಿಯಲ್ಲಿದ್ದಾರೆ, ಅರುವತ್ತರಷ್ಟು ರೈತರು ಚಳವಳಿ ಮಾಡುತ್ತಲೇ ಮರಣ ಹೊಂದಿದ್ದಾರೆ. ಆದರೆ ಮೋದಿ ಸರಕಾರವು ಮಾನವೀಯತೆ ಇಲ್ಲದ ರೀತಿ ರೈತರನ್ನು ನಡೆಸಿಕೊಳ್ಳುತ್ತಿದೆ. ಈ ದೇಶದ ಬುನಾದಿಯಾಗಿರುವ ರೈತರಿಗೆ ನ್ಯಾಯ ಕೊಡಿಸಲಾಗದ ಬಿಜೆಪಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಇಲ್ಲ. ಕಾಂಗ್ರೆಸ್ ಸರಕಾರ ಸಾಧಿಸಿದ ಕೃಷಿ ಕ್ರಾಂತಿ, ಭೂಸುಧಾರಣೆ ಎಲ್ಲವನ್ನೂ ಬಿಜೆಪಿ ನಾಶ ಪಡಿಸುತ್ತಿದೆ. ಇದು ಬಿಜೆಪಿಯ ಅವನತಿಗೆ ಕಾರಣವಾಗಲಿದೆ ಎಂದರು.

ಸ್ಥಳೀಯ ಕಾರ್ಪೊರೇಟರ್ ವಿನಯರಾಜ್ ಮಾತನಾಡಿದರು. ಪ್ರತಿಭಟನೆಯಲ್ಲಿ ನಮಿತಾ ರಾವ್, ಗೀತಾ, ಮರಿಯಮ್ಮ ಥಾಮಸ್, ಮಂಜುಳ ನಾಯಕ್, ಜೀನತ್ ಸಂಶುದ್ದೀನ್, ಶಶಿಧರ ಹೆಗ್ಡೆ, ಕೇಶವ ಮರೋಳಿ, ನೀರಜ್ ಪಾಲ್, ಭರತೇಶ್ ಅಮೀನ್, ಟಿ. ಕೆ. ಸುಧೀರ್, ವಿಶ್ವಾಸ್ ದಾಸ್, ಯೂಸುಫ್ ಉಚ್ಚಿಲ, ಗಣೇಶ ರಾವ್ ಮೊದಲಾದವರು ಸೇರಿದ್ದರು.
Video:
In a show of support to the farmers protesting against the farm laws in New Delhi and Karnataka Mangalore, Congress leaders held a mass protest.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm