ಬ್ರೇಕಿಂಗ್ ನ್ಯೂಸ್
25-01-21 02:21 pm Mangalore Correspondent ಕರಾವಳಿ
ಮಂಗಳೂರು, ಜ.25: ಕರಾವಳಿಯಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸಕ್ರಿಯವಾಗಿದ್ದು ಗುಪ್ತಚರ ಅಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅರಣ್ಯ ಭಾಗದಲ್ಲಿ ಸ್ಯಾಟಲೈಟ್ ಫೋನ್ ಮತ್ತೆ ಸಂಪರ್ಕ ಕಂಡುಕೊಂಡಿದ್ದನ್ನು ಕೇಂದ್ರೀಯ ಗುಪ್ತಚರ ಸಂಸ್ಥೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಕಳೆದ ಒಂದು ವಾರದಲ್ಲಿ 5 ಬಾರಿ ಸ್ಯಾಟಲೈಟ್ ಫೋನ್ ಸಂಪರ್ಕ ಆಗಿರುವ ಬಗ್ಗೆ ಪತ್ತೆ ಮಾಡಲಾಗಿದ್ದು ನಿಗೂಢ ವ್ಯಕ್ತಿಗಳು ವಿದೇಶಕ್ಕೆ ಸಂಪರ್ಕ ಸಾಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ 5 ಕಡೆಗಳಲ್ಲಿ ನಿಷೇಧಿತ ತುರಾಯ ಫೋನ್ ರಿಂಗಣಿಸಿದ್ದನ್ನು ಕೇಂದ್ರ ಗುಪ್ತಚರ ಸಂಸ್ಥೆ ರಾ ಅಧಿಕಾರಿಗಳು ಖಚಿತ ಪಡಿಸಿದ್ದು ಈ ಬಗ್ಗೆ ರಾಜ್ಯ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ನಾವೂರು, ಧರ್ಮಸ್ಥಳ, ಕನಕಮಜಲು ಸೇರಿದಂತೆ 5 ಕಡೆಗಳಲ್ಲಿ ತುರಾಯ ಸ್ಯಾಟಲೈಟ್ ಫೋನ್ ವರ್ಕ್ ಆಗಿದ್ದು ನಿಗೂಢ ವ್ಯಕ್ತಿಗಳ ಜೊತೆ ಸಂಪರ್ಕ ಮಾಡಿವೆ. ಫೋನ್ ಆ್ಯಕ್ಟಿವ್ ಆಗಿರುವ ಪ್ರದೇಶಗಳು ಅರಣ್ಯ ಭಾಗಗಳಾಗಿದ್ದು ಯಾರು, ಯಾರೊಂದಿಗೆ ಮಾತನಾಡಿದ್ದಾರೆ ಎಂಬುದನ್ನು ಅಧಿಕಾರಿಗಳಿಗೆ ಪತ್ತೆ ಮಾಡಲು ಸಾಧ್ಯ ಆಗಿಲ್ಲ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯದ ಗುಪ್ತಚರ ಅಧಿಕಾರಿಗಳು ತನಿಖೆ ಆರಂಭಿಸಿದ್ದು ತೀವ್ರ ತಲೆಕೆಡಿಸಿ ಕೊಂಡಿದ್ದಾರೆ.

ಫೋನ್ ಸಂಪರ್ಕ ಆಗಿರುವ ಬಗ್ಗೆ ಲೊಕೇಷನ್ ಟ್ರೇಸ್ ಮಾಡಿರೋ 'ರಾ' ಅಧಿಕಾರಿಗಳು ಅದರ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ.
ಸ್ಯಾಟಲೈಟ್ ಫೋನ್ ಗಳು ಕರಾವಳಿಯಲ್ಲಿ ದಿಢೀರಾಗಿ ಆ್ಯಕ್ಟಿವ್ ಆಗಿರುವುದು ಕುತೂಹಲ ಮತ್ತು ಆತಂಕ ಮೂಡಿಸಿದೆ. ತುರಾಯ ಸ್ಯಾಟಲೈಟ್ ಫೋನ್ ಗಳನ್ನು ಉಗ್ರರು ದುರ್ಬಳಕೆ ಮಾಡುತ್ತಿದ್ದಾರೆಂಬ ನೆಲೆಯಲ್ಲಿ ಭಾರತದಲ್ಲಿ ಅದರ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಈ ನಡುವೆ, ಉಗ್ರರ ಸ್ಲೀಪರ್ ಸೆಲ್ ಎಂದೇ ಹೇಳಲಾಗಿರುವ ಕರಾವಳಿಯಲ್ಲಿ ದಿಢೀರ್ ಆಗಿ ಸ್ಯಾಟಲೈಟ್ ಫೋನ್ ರಿಂಗಣಿಸಿದ್ದು ನಿಗೂಢ ಚಲನವಲನಕ್ಕೆ ಸಾಕ್ಷಿಯೆಂದೇ ಹೇಳಲಾಗುತ್ತಿದೆ. ಹೀಗಾಗಿ ಕೇಂದ್ರ ಗೂಢಚಾರರು ಮತ್ತೆ ನಿಗೂಢವಾಗಿಯೇ ಕರಾವಳಿಯತ್ತ ಹೆಜ್ಜೆ ಇಟ್ಟಿದ್ದಾರೆ.
ಕರಾವಳಿಯಲ್ಲಿ ಮತ್ತೆ ರಿಂಗಣಿಸ್ತಿದೆ ಸ್ಯಾಟಲೈಟ್ ಫೋನ್ !! ಉಗ್ರರ ಸ್ಲೀಪರ್ ಸೆಲ್ ನಂಟಿನ ಬಗ್ಗೆ ಶಂಕೆ !
Satellite phone call signals are once again revealed in Belhangady of Mangalore. Security has been briefed up in Coastal areas.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm