ಬ್ರೇಕಿಂಗ್ ನ್ಯೂಸ್
26-01-21 02:04 pm Mangalore Correspondent ಕರಾವಳಿ
ಕೊಣಾಜೆ, ಜ.26 : ಗಣರಾಜ್ಯೋತ್ಸವ ದಿನ ಸರ್ಕಾರಿ ಸಂಸ್ಥೆಗಳ ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಗೌರವಪೂರ್ವಕವಾಗಿ ಹಾರಿಸುವುದು ಕಡ್ಡಾಯ. ಆದರೆ, ಇಲ್ಲಿನ ಬೆಳ್ಮ ಗ್ರಾಮ ಪಂಚಾಯತ್ ಕಚೇರಿಯ ಮುಂದೆ ಮಾತ್ರ ಬೆಳಗ್ಗೆ ಹತ್ತು ಗಂಟೆಯಾದರೂ ಧ್ವಜಾರೋಹಣ ಆಗಿರಲಿಲ್ಲ. ಸ್ಥಳೀಯರು ಪಿಡಿಓ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ಬಳಿಕ ಯಾರೋ ಒಬ್ಬ ತಾತ್ಕಾಲಿಕ ಸಿಬಂದಿ ಮೂಲಕ ಧ್ವಜವನ್ನು ಏರಿಸಿದ್ದಾರೆ. ಆತ ಚಪ್ಪಲಿ ಹಾಕಿ, ದೂರದಲ್ಲಿ ನಿಂತು ಧ್ವಜ ಏರಿಸಿದ್ದಲ್ಲದೆ ಧ್ವಜ ವಂದನೆಯನ್ನೂ ಮಾಡದೆ ಅವಮಾನ ಮಾಡಿದ್ದಾನೆ. ರಾಷ್ಟ್ರ ಧ್ವಜಕ್ಕೆ ಅಗೌರವ ಸೂಚಿಸಿದ ವ್ಯಕ್ತಿ ಮತ್ತು ನಿರ್ಲಕ್ಷ್ಯ ತೋರಿದ ಪಿಡಿಓ ಅಧಿಕಾರಿಯನ್ನು ಅಮಾನತು ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಗಣರಾಜ್ಯೋತ್ಸವ ದಿನ ಬೆಳಗ್ಗೆ ಒಂಬತ್ತು ಗಂಟೆ ಮೊದಲು ಸರ್ಕಾರಿ ಸಂಸ್ಥೆಗಳ ಮುಂದೆ ರಾಷ್ಟ್ರ ಧ್ವಜಾರೋಹಣ ಮಾಡಬೇಕೆಂದು ನಿಯಮ ಇದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ಬೆಳ್ಮ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ಸಮಯಕ್ಕೆ ಸರಿಯಾಗಿ ಧ್ವಜಾರೋಹಣ ನಡೆಯದಿರುವುದು ಸಾರ್ವಜನಿಕವಾಗಿ ಆಕ್ರೋಶಕ್ಕೆ ಕಾರಣವಾಯಿತು.

ಮಂಗಳೂರು ವಿಶ್ವವಿದ್ಯಾಲಯ ರಸ್ತೆಯಲ್ಲೇ ಗ್ರಾಪಂ ಕಚೇರಿ ಇರುವುದರಿಂದ ಹಾಗೂ ಮೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಅನತಿ ದೂರದಲ್ಲೇ ಇರುವುದರಿಂದ ಹೊರ ರಾಜ್ಯ ಹಾಗೂ ವಿದೇಶಿ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಇಂಥ ಜಾಗದಲ್ಲಿ ಬೆಳ್ಮ ಗ್ರಾಮ ಪಂಚಾಯಿತಿ ಎದುರಲ್ಲಿ ಈ ರೀತಿಯ ಅಸಡ್ಡೆ ಆಗಿರುವುದು ಯಾವ ಸಂದೇಶ ತಲುಪಬಹುದು ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ.

ಬೆಳ್ಮ ಪಂಚಾಯಿತಿ ಪಿಡಿಒ ನವೀನ್ ಹೆಗ್ಡೆ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿದೆ. ಇದೇ ವೇಳೆ, ಯುವಕನೊಬ್ಬ ಸಾದಾ ಸೀದಾ ಎನ್ನುವ ರೀತಿ ರಾಷ್ಟ್ರ ಧ್ವಜವನ್ನು ಏರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜನರ ಟೀಕೆ, ಟಿಪ್ಪಣಿಗೆ ಆಹಾರವಾಗಿದೆ.
Video:
PDO of Belma gram panchayat Naveen Hedge in Mangalore has shown disrespect to national flag. Villagers urge suspension.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm