ಬ್ರೇಕಿಂಗ್ ನ್ಯೂಸ್
26-01-21 02:04 pm Mangalore Correspondent ಕರಾವಳಿ
ಕೊಣಾಜೆ, ಜ.26 : ಗಣರಾಜ್ಯೋತ್ಸವ ದಿನ ಸರ್ಕಾರಿ ಸಂಸ್ಥೆಗಳ ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಗೌರವಪೂರ್ವಕವಾಗಿ ಹಾರಿಸುವುದು ಕಡ್ಡಾಯ. ಆದರೆ, ಇಲ್ಲಿನ ಬೆಳ್ಮ ಗ್ರಾಮ ಪಂಚಾಯತ್ ಕಚೇರಿಯ ಮುಂದೆ ಮಾತ್ರ ಬೆಳಗ್ಗೆ ಹತ್ತು ಗಂಟೆಯಾದರೂ ಧ್ವಜಾರೋಹಣ ಆಗಿರಲಿಲ್ಲ. ಸ್ಥಳೀಯರು ಪಿಡಿಓ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ಬಳಿಕ ಯಾರೋ ಒಬ್ಬ ತಾತ್ಕಾಲಿಕ ಸಿಬಂದಿ ಮೂಲಕ ಧ್ವಜವನ್ನು ಏರಿಸಿದ್ದಾರೆ. ಆತ ಚಪ್ಪಲಿ ಹಾಕಿ, ದೂರದಲ್ಲಿ ನಿಂತು ಧ್ವಜ ಏರಿಸಿದ್ದಲ್ಲದೆ ಧ್ವಜ ವಂದನೆಯನ್ನೂ ಮಾಡದೆ ಅವಮಾನ ಮಾಡಿದ್ದಾನೆ. ರಾಷ್ಟ್ರ ಧ್ವಜಕ್ಕೆ ಅಗೌರವ ಸೂಚಿಸಿದ ವ್ಯಕ್ತಿ ಮತ್ತು ನಿರ್ಲಕ್ಷ್ಯ ತೋರಿದ ಪಿಡಿಓ ಅಧಿಕಾರಿಯನ್ನು ಅಮಾನತು ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಗಣರಾಜ್ಯೋತ್ಸವ ದಿನ ಬೆಳಗ್ಗೆ ಒಂಬತ್ತು ಗಂಟೆ ಮೊದಲು ಸರ್ಕಾರಿ ಸಂಸ್ಥೆಗಳ ಮುಂದೆ ರಾಷ್ಟ್ರ ಧ್ವಜಾರೋಹಣ ಮಾಡಬೇಕೆಂದು ನಿಯಮ ಇದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ಬೆಳ್ಮ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ಸಮಯಕ್ಕೆ ಸರಿಯಾಗಿ ಧ್ವಜಾರೋಹಣ ನಡೆಯದಿರುವುದು ಸಾರ್ವಜನಿಕವಾಗಿ ಆಕ್ರೋಶಕ್ಕೆ ಕಾರಣವಾಯಿತು.

ಮಂಗಳೂರು ವಿಶ್ವವಿದ್ಯಾಲಯ ರಸ್ತೆಯಲ್ಲೇ ಗ್ರಾಪಂ ಕಚೇರಿ ಇರುವುದರಿಂದ ಹಾಗೂ ಮೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಅನತಿ ದೂರದಲ್ಲೇ ಇರುವುದರಿಂದ ಹೊರ ರಾಜ್ಯ ಹಾಗೂ ವಿದೇಶಿ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಇಂಥ ಜಾಗದಲ್ಲಿ ಬೆಳ್ಮ ಗ್ರಾಮ ಪಂಚಾಯಿತಿ ಎದುರಲ್ಲಿ ಈ ರೀತಿಯ ಅಸಡ್ಡೆ ಆಗಿರುವುದು ಯಾವ ಸಂದೇಶ ತಲುಪಬಹುದು ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ.

ಬೆಳ್ಮ ಪಂಚಾಯಿತಿ ಪಿಡಿಒ ನವೀನ್ ಹೆಗ್ಡೆ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿದೆ. ಇದೇ ವೇಳೆ, ಯುವಕನೊಬ್ಬ ಸಾದಾ ಸೀದಾ ಎನ್ನುವ ರೀತಿ ರಾಷ್ಟ್ರ ಧ್ವಜವನ್ನು ಏರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜನರ ಟೀಕೆ, ಟಿಪ್ಪಣಿಗೆ ಆಹಾರವಾಗಿದೆ.
Video:
PDO of Belma gram panchayat Naveen Hedge in Mangalore has shown disrespect to national flag. Villagers urge suspension.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm