ಬ್ರೇಕಿಂಗ್ ನ್ಯೂಸ್
26-01-21 02:04 pm Mangalore Correspondent ಕರಾವಳಿ
ಕೊಣಾಜೆ, ಜ.26 : ಗಣರಾಜ್ಯೋತ್ಸವ ದಿನ ಸರ್ಕಾರಿ ಸಂಸ್ಥೆಗಳ ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಗೌರವಪೂರ್ವಕವಾಗಿ ಹಾರಿಸುವುದು ಕಡ್ಡಾಯ. ಆದರೆ, ಇಲ್ಲಿನ ಬೆಳ್ಮ ಗ್ರಾಮ ಪಂಚಾಯತ್ ಕಚೇರಿಯ ಮುಂದೆ ಮಾತ್ರ ಬೆಳಗ್ಗೆ ಹತ್ತು ಗಂಟೆಯಾದರೂ ಧ್ವಜಾರೋಹಣ ಆಗಿರಲಿಲ್ಲ. ಸ್ಥಳೀಯರು ಪಿಡಿಓ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ಬಳಿಕ ಯಾರೋ ಒಬ್ಬ ತಾತ್ಕಾಲಿಕ ಸಿಬಂದಿ ಮೂಲಕ ಧ್ವಜವನ್ನು ಏರಿಸಿದ್ದಾರೆ. ಆತ ಚಪ್ಪಲಿ ಹಾಕಿ, ದೂರದಲ್ಲಿ ನಿಂತು ಧ್ವಜ ಏರಿಸಿದ್ದಲ್ಲದೆ ಧ್ವಜ ವಂದನೆಯನ್ನೂ ಮಾಡದೆ ಅವಮಾನ ಮಾಡಿದ್ದಾನೆ. ರಾಷ್ಟ್ರ ಧ್ವಜಕ್ಕೆ ಅಗೌರವ ಸೂಚಿಸಿದ ವ್ಯಕ್ತಿ ಮತ್ತು ನಿರ್ಲಕ್ಷ್ಯ ತೋರಿದ ಪಿಡಿಓ ಅಧಿಕಾರಿಯನ್ನು ಅಮಾನತು ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಗಣರಾಜ್ಯೋತ್ಸವ ದಿನ ಬೆಳಗ್ಗೆ ಒಂಬತ್ತು ಗಂಟೆ ಮೊದಲು ಸರ್ಕಾರಿ ಸಂಸ್ಥೆಗಳ ಮುಂದೆ ರಾಷ್ಟ್ರ ಧ್ವಜಾರೋಹಣ ಮಾಡಬೇಕೆಂದು ನಿಯಮ ಇದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ಬೆಳ್ಮ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ಸಮಯಕ್ಕೆ ಸರಿಯಾಗಿ ಧ್ವಜಾರೋಹಣ ನಡೆಯದಿರುವುದು ಸಾರ್ವಜನಿಕವಾಗಿ ಆಕ್ರೋಶಕ್ಕೆ ಕಾರಣವಾಯಿತು.

ಮಂಗಳೂರು ವಿಶ್ವವಿದ್ಯಾಲಯ ರಸ್ತೆಯಲ್ಲೇ ಗ್ರಾಪಂ ಕಚೇರಿ ಇರುವುದರಿಂದ ಹಾಗೂ ಮೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಅನತಿ ದೂರದಲ್ಲೇ ಇರುವುದರಿಂದ ಹೊರ ರಾಜ್ಯ ಹಾಗೂ ವಿದೇಶಿ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಇಂಥ ಜಾಗದಲ್ಲಿ ಬೆಳ್ಮ ಗ್ರಾಮ ಪಂಚಾಯಿತಿ ಎದುರಲ್ಲಿ ಈ ರೀತಿಯ ಅಸಡ್ಡೆ ಆಗಿರುವುದು ಯಾವ ಸಂದೇಶ ತಲುಪಬಹುದು ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ.

ಬೆಳ್ಮ ಪಂಚಾಯಿತಿ ಪಿಡಿಒ ನವೀನ್ ಹೆಗ್ಡೆ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿದೆ. ಇದೇ ವೇಳೆ, ಯುವಕನೊಬ್ಬ ಸಾದಾ ಸೀದಾ ಎನ್ನುವ ರೀತಿ ರಾಷ್ಟ್ರ ಧ್ವಜವನ್ನು ಏರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜನರ ಟೀಕೆ, ಟಿಪ್ಪಣಿಗೆ ಆಹಾರವಾಗಿದೆ.
Video:
PDO of Belma gram panchayat Naveen Hedge in Mangalore has shown disrespect to national flag. Villagers urge suspension.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm