ಬ್ರೇಕಿಂಗ್ ನ್ಯೂಸ್
26-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.26: ಈ ಬಾರಿ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಏಕೈಕ ವಿದ್ಯಾರ್ಥಿನಿ ಭಾಗವಹಿಸಿದ್ದಾಳೆ. ಪುತ್ತೂರಿನ ಫಿಲೋಮಿನಾ ಕಾಲೇಜಿನ ರಕ್ಷಾ ಅಂಚನ್ ಎನ್ ಸಿಸಿ ಕ್ಯಾಡೆಟ್ ಆಗಿ ಭಾಗವಹಿಸಿದ ವಿದ್ಯಾರ್ಥಿನಿ.
ಸಾಮಾನ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹತ್ತಕ್ಕೂ ಹೆಚ್ಚು ಮಂದಿ ಎನ್ ಸಿಸಿ ಕೆಡೆಟ್ ಗಳು ಭಾಗವಹಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ನಿರ್ಬಂಧ ಇದ್ದ ಕಾರಣ ಒಬ್ಬರನ್ನು ಮಾತ್ರ ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ. ಪ್ರತಿ ವರ್ಷ ಗೋವಾ- ಕರ್ನಾಟಕ ಡೈರೆಕ್ಟರೇಟ್ ನಿಂದ 111 ಕೆಡೆಟ್ ಗಳು ರಿಪಬ್ಲಿಕ್ ಪರೇಡ್ ನಲ್ಲಿ ಭಾಗವಹಿಸುತ್ತಾರೆ. ಈ ಬಾರಿ ವಿಭಾಗದಿಂದ ಕೇವಲ 26 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದರಲ್ಲಿ 16 ಮಂದಿ ಹುಡುಗರಾಗಿದ್ದು, 10 ಮಂದಿ ಹುಡುಗಿಯರು. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಡಬ ತಾಲೂಕಿನ ರಕ್ಷಾ ಅಂಚನ್ ಒಬ್ಬರಷ್ಟೇ ಆಯ್ಕೆಯಾಗಿದ್ದರು. ರಕ್ಷಾ ಅವರು ನೆಲ್ಯಾಡಿಯ ಉದ್ಯಮಿ ರಮೇಶ್ ಹಾಗೂ ಕಾಂಗ್ರೆಸ್ ನಾಯಕಿ, ಪುತ್ತೂರು ತಾಲೂಕು ಪಂಚಾಯತ್ ಸದಸ್ಯೆ ಉಷಾ ಅಂಚನ್ ಅವರ ಪುತ್ರಿ.


ಕಳೆದ ಡಿ.17ರಂದು ದೆಹಲಿಗೆ ಪ್ರಯಾಣ ಬೆಳೆಸಿದ್ದ ರಕ್ಷಾ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿದ್ದು ಜ.3ರಿಂದ ಪರೇಟ್ ತರಬೇತಿಯನ್ನು ಪಡೆದಿದ್ದರು. ಅಂದಹಾಗೆ, ರಕ್ಷಾ ಅಂಚನ್ ಫಿಲೋಮಿನಾ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ. ಈ ಹಿಂದೆಲ್ಲಾ ಪ್ರತಿ ವರ್ಷ 11-12 ಮಂದಿ ಕೆಡೆಟ್ ಗಳಿಗೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಲು ಅವಕಾಶ ಸಿಗುತ್ತಿತ್ತು. ಆದರೆ, ಈ ಬಾರಿ ಕೊರೊನಾದಿಂದಾಗಿ ಜಿಲ್ಲೆಯಿಂದ ಒಬ್ಬಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಈ ಬಾರಿಯೂ ಹಲವು ಮಂದಿ ಪ್ರತಿಭಾವಂತ ಕೆಡೆಟ್ ಗಳಿದ್ದರು.
ಕಳೆದ ಬಾರಿ ರಕ್ಷಾ ಅಂಚನ್ ಅದೇ ಪರೇಡ್ ನಲ್ಲಿ ಭಾಗವಹಿಸುವುದರಿಂದ ಮಿಸ್ ಆಗಿದ್ದಳು. ಹೀಗಾಗಿ ರಕ್ಷಾಳನ್ನು ಈ ಬಾರಿ ಆಯ್ಕೆ ಮಾಡಲಾಯ್ತು ಎಂದು ಕಾಲೇಜಿನ ಎನ್ ಸಿಸಿ ಅಧಿಕಾರಿ ಜಾನ್ಸನ್ ಹೇಳಿದ್ದಾರೆ.
Raksha Anchan, a B Sc student from St Philomena College, Puttur is the ONLY NCC Cadet from Dakshina Kannada to participate in Republic Day Parade in New Delhi on 26 January 2021
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm