ಬ್ರೇಕಿಂಗ್ ನ್ಯೂಸ್
26-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.26: ಈ ಬಾರಿ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಏಕೈಕ ವಿದ್ಯಾರ್ಥಿನಿ ಭಾಗವಹಿಸಿದ್ದಾಳೆ. ಪುತ್ತೂರಿನ ಫಿಲೋಮಿನಾ ಕಾಲೇಜಿನ ರಕ್ಷಾ ಅಂಚನ್ ಎನ್ ಸಿಸಿ ಕ್ಯಾಡೆಟ್ ಆಗಿ ಭಾಗವಹಿಸಿದ ವಿದ್ಯಾರ್ಥಿನಿ.
ಸಾಮಾನ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹತ್ತಕ್ಕೂ ಹೆಚ್ಚು ಮಂದಿ ಎನ್ ಸಿಸಿ ಕೆಡೆಟ್ ಗಳು ಭಾಗವಹಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ನಿರ್ಬಂಧ ಇದ್ದ ಕಾರಣ ಒಬ್ಬರನ್ನು ಮಾತ್ರ ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ. ಪ್ರತಿ ವರ್ಷ ಗೋವಾ- ಕರ್ನಾಟಕ ಡೈರೆಕ್ಟರೇಟ್ ನಿಂದ 111 ಕೆಡೆಟ್ ಗಳು ರಿಪಬ್ಲಿಕ್ ಪರೇಡ್ ನಲ್ಲಿ ಭಾಗವಹಿಸುತ್ತಾರೆ. ಈ ಬಾರಿ ವಿಭಾಗದಿಂದ ಕೇವಲ 26 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದರಲ್ಲಿ 16 ಮಂದಿ ಹುಡುಗರಾಗಿದ್ದು, 10 ಮಂದಿ ಹುಡುಗಿಯರು. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಡಬ ತಾಲೂಕಿನ ರಕ್ಷಾ ಅಂಚನ್ ಒಬ್ಬರಷ್ಟೇ ಆಯ್ಕೆಯಾಗಿದ್ದರು. ರಕ್ಷಾ ಅವರು ನೆಲ್ಯಾಡಿಯ ಉದ್ಯಮಿ ರಮೇಶ್ ಹಾಗೂ ಕಾಂಗ್ರೆಸ್ ನಾಯಕಿ, ಪುತ್ತೂರು ತಾಲೂಕು ಪಂಚಾಯತ್ ಸದಸ್ಯೆ ಉಷಾ ಅಂಚನ್ ಅವರ ಪುತ್ರಿ.


ಕಳೆದ ಡಿ.17ರಂದು ದೆಹಲಿಗೆ ಪ್ರಯಾಣ ಬೆಳೆಸಿದ್ದ ರಕ್ಷಾ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿದ್ದು ಜ.3ರಿಂದ ಪರೇಟ್ ತರಬೇತಿಯನ್ನು ಪಡೆದಿದ್ದರು. ಅಂದಹಾಗೆ, ರಕ್ಷಾ ಅಂಚನ್ ಫಿಲೋಮಿನಾ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ. ಈ ಹಿಂದೆಲ್ಲಾ ಪ್ರತಿ ವರ್ಷ 11-12 ಮಂದಿ ಕೆಡೆಟ್ ಗಳಿಗೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಲು ಅವಕಾಶ ಸಿಗುತ್ತಿತ್ತು. ಆದರೆ, ಈ ಬಾರಿ ಕೊರೊನಾದಿಂದಾಗಿ ಜಿಲ್ಲೆಯಿಂದ ಒಬ್ಬಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಈ ಬಾರಿಯೂ ಹಲವು ಮಂದಿ ಪ್ರತಿಭಾವಂತ ಕೆಡೆಟ್ ಗಳಿದ್ದರು.
ಕಳೆದ ಬಾರಿ ರಕ್ಷಾ ಅಂಚನ್ ಅದೇ ಪರೇಡ್ ನಲ್ಲಿ ಭಾಗವಹಿಸುವುದರಿಂದ ಮಿಸ್ ಆಗಿದ್ದಳು. ಹೀಗಾಗಿ ರಕ್ಷಾಳನ್ನು ಈ ಬಾರಿ ಆಯ್ಕೆ ಮಾಡಲಾಯ್ತು ಎಂದು ಕಾಲೇಜಿನ ಎನ್ ಸಿಸಿ ಅಧಿಕಾರಿ ಜಾನ್ಸನ್ ಹೇಳಿದ್ದಾರೆ.
Raksha Anchan, a B Sc student from St Philomena College, Puttur is the ONLY NCC Cadet from Dakshina Kannada to participate in Republic Day Parade in New Delhi on 26 January 2021
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm