ಬ್ರೇಕಿಂಗ್ ನ್ಯೂಸ್
26-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.26: ಈ ಬಾರಿ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಏಕೈಕ ವಿದ್ಯಾರ್ಥಿನಿ ಭಾಗವಹಿಸಿದ್ದಾಳೆ. ಪುತ್ತೂರಿನ ಫಿಲೋಮಿನಾ ಕಾಲೇಜಿನ ರಕ್ಷಾ ಅಂಚನ್ ಎನ್ ಸಿಸಿ ಕ್ಯಾಡೆಟ್ ಆಗಿ ಭಾಗವಹಿಸಿದ ವಿದ್ಯಾರ್ಥಿನಿ.
ಸಾಮಾನ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹತ್ತಕ್ಕೂ ಹೆಚ್ಚು ಮಂದಿ ಎನ್ ಸಿಸಿ ಕೆಡೆಟ್ ಗಳು ಭಾಗವಹಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ನಿರ್ಬಂಧ ಇದ್ದ ಕಾರಣ ಒಬ್ಬರನ್ನು ಮಾತ್ರ ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ. ಪ್ರತಿ ವರ್ಷ ಗೋವಾ- ಕರ್ನಾಟಕ ಡೈರೆಕ್ಟರೇಟ್ ನಿಂದ 111 ಕೆಡೆಟ್ ಗಳು ರಿಪಬ್ಲಿಕ್ ಪರೇಡ್ ನಲ್ಲಿ ಭಾಗವಹಿಸುತ್ತಾರೆ. ಈ ಬಾರಿ ವಿಭಾಗದಿಂದ ಕೇವಲ 26 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದರಲ್ಲಿ 16 ಮಂದಿ ಹುಡುಗರಾಗಿದ್ದು, 10 ಮಂದಿ ಹುಡುಗಿಯರು. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಡಬ ತಾಲೂಕಿನ ರಕ್ಷಾ ಅಂಚನ್ ಒಬ್ಬರಷ್ಟೇ ಆಯ್ಕೆಯಾಗಿದ್ದರು. ರಕ್ಷಾ ಅವರು ನೆಲ್ಯಾಡಿಯ ಉದ್ಯಮಿ ರಮೇಶ್ ಹಾಗೂ ಕಾಂಗ್ರೆಸ್ ನಾಯಕಿ, ಪುತ್ತೂರು ತಾಲೂಕು ಪಂಚಾಯತ್ ಸದಸ್ಯೆ ಉಷಾ ಅಂಚನ್ ಅವರ ಪುತ್ರಿ.


ಕಳೆದ ಡಿ.17ರಂದು ದೆಹಲಿಗೆ ಪ್ರಯಾಣ ಬೆಳೆಸಿದ್ದ ರಕ್ಷಾ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿದ್ದು ಜ.3ರಿಂದ ಪರೇಟ್ ತರಬೇತಿಯನ್ನು ಪಡೆದಿದ್ದರು. ಅಂದಹಾಗೆ, ರಕ್ಷಾ ಅಂಚನ್ ಫಿಲೋಮಿನಾ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ. ಈ ಹಿಂದೆಲ್ಲಾ ಪ್ರತಿ ವರ್ಷ 11-12 ಮಂದಿ ಕೆಡೆಟ್ ಗಳಿಗೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಲು ಅವಕಾಶ ಸಿಗುತ್ತಿತ್ತು. ಆದರೆ, ಈ ಬಾರಿ ಕೊರೊನಾದಿಂದಾಗಿ ಜಿಲ್ಲೆಯಿಂದ ಒಬ್ಬಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಈ ಬಾರಿಯೂ ಹಲವು ಮಂದಿ ಪ್ರತಿಭಾವಂತ ಕೆಡೆಟ್ ಗಳಿದ್ದರು.
ಕಳೆದ ಬಾರಿ ರಕ್ಷಾ ಅಂಚನ್ ಅದೇ ಪರೇಡ್ ನಲ್ಲಿ ಭಾಗವಹಿಸುವುದರಿಂದ ಮಿಸ್ ಆಗಿದ್ದಳು. ಹೀಗಾಗಿ ರಕ್ಷಾಳನ್ನು ಈ ಬಾರಿ ಆಯ್ಕೆ ಮಾಡಲಾಯ್ತು ಎಂದು ಕಾಲೇಜಿನ ಎನ್ ಸಿಸಿ ಅಧಿಕಾರಿ ಜಾನ್ಸನ್ ಹೇಳಿದ್ದಾರೆ.
Raksha Anchan, a B Sc student from St Philomena College, Puttur is the ONLY NCC Cadet from Dakshina Kannada to participate in Republic Day Parade in New Delhi on 26 January 2021
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm