ಬ್ರೇಕಿಂಗ್ ನ್ಯೂಸ್
27-01-21 12:13 pm Mangalore Correspondent ಕರಾವಳಿ
ಮಂಗಳೂರು, ಜ. 27: ಗುರುಪುರವನ್ನು ಸುತ್ತಿಕೊಂಡು ಹರಿಯುವ ಫಲ್ಗುಣಿ ನದಿಯ ನೀರು ದಿಢೀರ್ ಕಪ್ಪುಬಣ್ಣಕ್ಕೆ ತಿರುಗಿದೆ. ಕೆಲವು ಕಡೆ ನೀರಿನಲ್ಲಿ ಮೀನುಗಳು ಸತ್ತು ಬಿದ್ದಿರುವುದು ಕಂಡುಬಂದಿದೆ.
ಇತ್ತ ನದಿ ನೀರು ಕಲುಷಿತ ಆಗಿರುವ ಮಧ್ಯೆಯೇ ಉಳಾಯಿಬೆಟ್ಟು, ಗುರುಪುರ, ಕಾರಮೊಗರು, ಏತಮೊಗರು ಆಸುಪಾಸಿನ ಪ್ರದೇಶಗಳಲ್ಲಿ ನದಿ ತೀರದ ನಿವಾಸಿಗಳ ಬಾವಿ ನೀರು ಕೂಡ ಕಪ್ಪಾಗಿದ್ದು ಮಾಲಿನ್ಯ ಮಿಶ್ರಿತವಾಗಿರುವುದು ಕಂಡುಬಂದಿದೆ.
ಗೋಳಿದಡಿಗುತ್ತಿನ ಶ್ರೀ ಮಹಾಕಾಲೇಶ್ವರ ದೇವರ ಉಜ್ಜೈನಿ ತೀರ್ಥಬಾವಿಯ ನೀರು ಸಂಪೂರ್ಣವಾಗಿ ಕಲುಷಿತವಾಗಿದೆ. ಎಂಆರ್ ಪಿಎಲ್, ಎಸ್ ಇಝೆಡ್ ವ್ಯಾಪ್ತಿಯ ಕಾರ್ಖಾನೆಗಳಿಂದ ನದಿಗೆ ಬಿಡುತ್ತಿರುವ ನೀರಿನಿಂದಾಗಿ ಮಳವೂರು ಡ್ಯಾಂನಲ್ಲಿ ಮತ್ತು ನದಿಯ ನೀರು ಕಪ್ಪಾಗಿದೆ. ಅಲ್ಲದೆ, ಆಸುಪಾಸಿನ ಬಾವಿಗಳ ನೀರು ಮಲಿನವಾಗಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಗುರುಪುರ, ಕಂದಾವರ, ಗಂಜಿಮಠ ಹಾಗೂ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನರಿಗೆ ಫಲ್ಗುಣಿ ನದಿಯಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ನದಿ ನೀರನ್ನು ಶುದ್ದೀಕರಿಸಿ ಪೂರೈಕೆ ಮಾಡಲಾಗುತ್ತದೆ ಎಂದು ಪಂಚಾಯತ್ ಅಧಿಕಾರಿಗಳು ಹೇಳುತ್ತಿದ್ದರೂ ಈ ನೀರು ಕುಡಿಯಲು ಯೋಗ್ಯವಲ್ಲ. ಶುದ್ದೀಕರಣ ಘಟಕವೂ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರ ದೂರಿನ ಪ್ರಕಾರ, ಉಪ ತಹಶೀಲ್ದಾರ್ ಶಿವಪ್ರಸಾದ್ ಮತ್ತು ಕಂದಾಯ ನಿರೀಕ್ಷಕ ನವನೀತ ಮಾಳವ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಈ ಹಿಂದೆ ಪಿಲಿಕುಳ ನಿಸರ್ಗಧಾಮದ ಬಳಕೆಗೆ ನೀಡಲಾಗುತ್ತಿದ್ದ ಮಂಗಳೂರು ನಗರಪಾಲಿಕೆಯ ವ್ಯಾಪ್ತಿಯ ತ್ಯಾಜ್ಯ ನೀರನ್ನು ಈಗ ಪಚ್ಚನಾಡಿಯಿಂದ ಮಂಜಲ್ಪಾದೆಯಾಗಿ ಫಲ್ಗುಣಿ ನದಿಗೆ ನೇರವಾಗಿ ಬಿಡಲಾಗುತ್ತಿದೆ. ಶುದ್ಧೀಕರಿಸದೆ ನೀರನ್ನು ಕೊಡುತ್ತಿದ್ದುದಕ್ಕೆ ಪಿಲಿಕುಳ ನಿಸರ್ಗಧಾಮ ಆಡಳಿತ ಆಕ್ಷೇಪಿಸಿ, ಪಾಲಿಕೆಯ ತ್ಯಾಜ್ಯ ನೀರನ್ನೇ ನಿರಾಕರಿಸಿತ್ತು. ಆನಂತರ ತ್ಯಾಜ್ಯ ನೀರನ್ನು ಮಂಜಲ್ಪಾದೆಯಿಂದ ನೇರವಾಗಿ ಫಲ್ಗುಣಿ ನದಿಗೆ ಬಿಡಲಾಗುತ್ತಿದೆ.
ಈ ಬಗ್ಗೆ ಹಿಂದೊಮ್ಮೆ ಮೂಡುಶೆಡ್ಡೆಯಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದೂ ಆಗಿತ್ತು. ಈಗ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು ಕಾರ್ಖಾನೆಗಳ ತ್ಯಾಜ್ಯದ ಜೊತೆಗೆ ಇಂಥ ತ್ಯಾಜ್ಯ ನೀರಿನ ಮಾಲಿನ್ಯವೂ ಕಾರಣವಾಗಿದೆ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಇನ್ನೂ ಜಾಗೃತಗೊಂಡಿಲ್ಲ.
Factories Pollution surrounding river Phalguni in Mangalore has turned the river black by killing large number of fishes.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 10:10 pm
HK News Desk
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm