ಬ್ರೇಕಿಂಗ್ ನ್ಯೂಸ್
27-01-21 12:28 pm Udupi Correspondent ಕರಾವಳಿ
ಉಡುಪಿ, ಜ.27: ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಸಮಾರಂಭದ ಮೆರವಣಿಗೆಯಲ್ಲಿ ಮೂರೂವರೆ ವರ್ಷದ ಪುಟಾಣಿ ಹುಡುಗಿಯೊಬ್ಬಳು ಸೇನಾ ಸಮವಸ್ತ್ರ ಧರಿಸಿ, ಕೈಯಲ್ಲಿ ಮೆಷಿನ್ ಗನ್ ಹಿಡಿದು ನಡೆದಾಡಿದ್ದು, ಎಲ್ಲರ ಗಮನ ಸೆಳೆದಿದ್ದಾಳೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸಿದ್ದು ಮೀನುಗಾರಿಕಾ ಸಚಿವ ಎಸ್. ಅಂಗಾರ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸುವ ರೀತಿ ಸಮವಸ್ತ್ರ ಧರಿಸಿದ್ದ ಪುಟಾಣಿ ನಡೆದಾಡುತ್ತಿದ್ದುದು ಗಮನ ಸೆಳೆದಿತ್ತು.


ಮೆರವಣಿಗೆಯಲ್ಲಿ ಇತರ ಪೊಲೀಸರು, ಎನ್ ಸಿಸಿ ಕೆಡೆಟ್ ಗಳ ಜೊತೆ ಗಮನ ಸೆಳೆದಿದ್ದು ಪುಟಾಣಿ ಮಯೂರಿ ಪ್ರಭು. ಮಯೂರಿಯ ತಂದೆ ರಾಘವೇಂದ್ರ ಪ್ರಭು ಉಡುಪಿ ಅಂಚೆ ಕಚೇರಿಯಲ್ಲಿ ಪೋಸ್ಟ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಶ್ರೀದೇವಿ ಗೃಹಿಣಿ. ತಮ್ಮ ಮಗಳು ಪೊಲೀಸ್ ಅಧಿಕಾರಿಯಾಗಬೇಕು ಎಂಬ ಕನಸಿಗೆ ನೀರೆರೆಯುವಂತೆ ಪೋಷಕರು ಸಣ್ಣಂದಿನಲ್ಲೇ ಅದಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವಾಗ ಆಕೆಗೆ ಸೇನಾ ಸಮವಸ್ತ್ರವನ್ನು ತೊಡಿಸಿ, ಪಥಸಂಚಲನಕ್ಕೆ ಕರೆತರುತ್ತಾರೆ. ಈ ಬಾರಿ ಗಣರಾಜ್ಯೋತ್ಸವಕ್ಕೆ ಆಕೆಯ ಪೋಷಕರು ಸೇನಾ ಸಮವಸ್ತ್ರ ನೀಡಿದ್ದು ಕಾರ್ಯಕ್ರಮದಲ್ಲಿ ಆಕರ್ಷಣೆಗೆ ಕಾರಣವಾಯಿತು.

ಮಯೂರಿ ಕೊನೆಗೆ ಸಚಿವ ಎಸ್. ಅಂಗಾರ ಹಾಗೂ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ. ಬಳಿಕ ಇಬ್ಬರೂ ಪುಟಾಣಿಗೆ ಶುಭ ಹಾರೈಸಿದ್ದಾರೆ.
Three and a half-year-old girl, in army uniform, with a machine gun in hand, stole the show at the Republic Day parade that was held in the city on Tuesday, January 26.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm